BIG NEWS : ರಾಜ್ಯದ ಶಾಲಾ ಮುಖ್ಯ ಶಿಕ್ಷಕರು ಅನ್ಯ ಕಾರ್ಯಕ್ಕೆ ತೆರಳುವಾಗ ‘ಆಹ್ವಾನ ಪತ್ರಿಕೆ’ ಲಗತ್ತಿಸುವುದು ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು : ಮುಖ್ಯ ಶಿಕ್ಷಕರು ಶಾಲೆಯಿಂದ ಅನ್ಯ ಕಾರ್ಯಕ್ಕೆ ತೆರಳುವಾಗ ದಾಖಲೆಯನ್ನು ನಿರ್ವಹಿಸುವುದು ಕಡ್ಡಾಯ ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಮೇಲಿನ ವಿಷಯ ಸಂಬಂಧಿಸಿದಂತೆ ಉಲ್ಲೇಖಿತ ಟಿಪ್ಪಣಿ ದಿನಾಂಕ: 21-09-2024 ರಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ, ಮುಖ್ಯ ಶಿಕ್ಷಕರು ಶಾಲೆಯ ಸಮಯದಲ್ಲಿ ಶಾಲೆಯಲ್ಲಿ ಉಪಸ್ಥಿತರಿಲ್ಲದೇ ಸಭೆ ಮತ್ತು ಸಮಾರಂಭಕ್ಕೆ ತೆರಳಿರುವುದಾಗಿ ತಿಳಿದುಬಂದಿದ್ದು, ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ನೀಡುವುದು ಸಾಧ್ಯವಾಗುತ್ತಿರುವುದಿಲ್ಲ. ಪ್ರಯುಕ್ತ ಮುಖ್ಯ ಶಿಕ್ಷಕರು ಇನ್ನು ಮುಂದೆ ಸಭೆ/ಸಮಾರಂಭಗಳಿಗೆ ತೆರಳುವ ನಮಯದಲ್ಲಿ ಚಲನ ವಲನ ವಹಿಯಲ್ಲಿ ನಮೂದಿಸಿ ಸಮಾರಂಭದ ಆಹ್ವಾನ ಪತ್ರಿಕೆ/ಸಭಾ ಸೂಚನಾ ಪತ್ರವನ್ನು ಲಗತ್ತಿಸುವಂತೆ ಎಲ್ಲಾ ಮುಖ್ಯ ಶಿಕ್ಷಕರುಗಳಿಗೆ ನಿರ್ದೇಶಿಸುವಂತೆ ಸೂಚಿಸಿರುತ್ತಾರೆ.

ಮುಖ್ಯ ಶಿಕ್ಷಕರು ಇನ್ನು ಮುಂದೆ ಸಭೆ/ ಸಮಾರಂಭಗಳಿಗೆ ತೆರಳುವ ಸಮಯದಲ್ಲಿ ಚಲನ ವಲನ ವಹಿಯಲ್ಲಿ ಕಡ್ಡಾಯವಾಗಿ ನಮೂದಿಸಿ ಸಮಾರಂಭದ ಆಹ್ವಾನ ಪತ್ರಿಕೆ/ ಸಭಾ ಸೂಚನಾ ಪತ್ರವನ್ನು ಲಗತ್ತಿಸುವಂತೆ ಎಲ್ಲಾ ಮುಖ್ಯ ಶಿಕ್ಷಕರುಗಳಿಗೆ ಅಗತ್ಯ ಸೂಚನೆಗಳನ್ನು ನೀಡುವಂತೆ ರಾಜ್ಯದ ಎಲ್ಲಾ ಉಪನಿರ್ದೇಶಕರುಗಳಿಗೆ ಸೂಚಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read