SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ : ಹಳೇ ದ್ವೇಷಕ್ಕೆ ಇಬ್ಬರು ಮಹಿಳೆಯರ ಮೇಲೆ ಕಬ್ಬಿಣದ ರಾಡ್ , ಕಲ್ಲುಗಳಿಂದ ಮಾರಣಾಂತಿಕ ಹಲ್ಲೆ.!

ಚಾಮರಾಜನಗರ : ಹಳೇ ದ್ವೇಷಕ್ಕೆ ಮಹಿಳೆಯರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಸವಪುರ ಗ್ರಾಮದಲ್ಲಿ ನಡೆದಿದೆ.

ಜ್ಯೋತಿ ಹಾಗೂ ಪೂರ್ಣಿಮಾ ಎಂಬುವವರ ಮೇಲೆ ಕಬ್ಬಿಣದ ರಾಡ್ ಹಾಗೂ ಕಲ್ಲುಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ. ಬಸವಪುರ ನಿವಾಸಿಗಳಾದ ಶಿವು ಹಾಗೂ ದರ್ಶನ್ ಎಂಬುವವರು ಈ ಹಲ್ಲೆ ನಡೆಸಿದ್ದಾರೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

2 ವರ್ಷದ ಹಿಂದೆ ಜ್ಯೋತಿಯನ್ನು ಇವರು ಚುಡಾಯಿಸಿದ್ದರು. ಈ ವಿಚಾರವಾಗಿ ಊರಿನ ದೊಡ್ಡವರು ಪಂಚಾಯಿತಿ ನಡೆಸಿದ್ದರು. ಈ ದ್ವೇಷದ ಹಿನ್ನೆಲೆ ಶಿವು ಹಾಗೂ ದರ್ಶನ್ ಏಕಾಏಕಿ ಗುಂಪು ಕಟ್ಟಿಕೊಂಡು ಬಂದು ಜ್ಯೋತಿ ಹಾಗೂ ಪೂರ್ಣಿಮಾ ಎಂಬುವವರ ಮೇಲೆ ಕಬ್ಬಿಣದ ರಾಡ್ ಹಾಗೂ ಕಲ್ಲುಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read