BREAKING : ‘DCC ಬ್ಯಾಂಕ್ ಹಗರಣ’ ಕೇಸ್  : ಶಿವಮೊಗ್ಗ, ಬೆಂಗಳೂರಿನಲ್ಲಿ ‘ED’ ಅಧಿಕಾರಿಗಳ ದಾಳಿ, ದಾಖಲೆಗಳ ಪರಿಶೀಲನೆ

ಶಿವಮೊಗ್ಗ : ನಕಲಿ ಚಿನ್ನ ಅಡವಿಟ್ಟು 62 ಕೋಟಿ ಸಾಲ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ, ಬೆಂಗಳೂರಿನಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

2014 ರ ಜೂನ್ ನಲ್ಲಿ ನಲ್ಲಿ ನಡೆದ ಡಿಸಿಸಿ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಅಂದು ಮ್ಯಾನೇಜರ್ ಆಗಿದ್ದ ಶೋಭಾ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗೋಪಾಲಗೌಡ ಬಡಾವಣೆಯಲ್ಲಿರುವ ಶೋಭಾ ಮನೆ ಮೇಲೆ ಅಧಿಕಾರಿಗಳು ನಡೆಸಿದ್ದಾರೆ.ಸುಮಾರು 8 ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಮಂಜುನಾಥ ಗೌಡ ಮನೆ ಮೇಲೂ ಕೂಡ ಇಡಿ ಅಧಿಕಾರಿಗಳು ನಡೆಸಿದ್ದಾರೆ. ಸುಮಾರು 10 ಕ್ಕೂ ಹೆಚ್ಚು ಇಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಅಪೆಕ್ಸ್ ಬ್ಯಾಂಕ್ ಗೆಸ್ಟ್ ಹೌಸ್ ನಲ್ಲಿ ಅಧಿಕಾರಿಗಳು ಮಂಜುನಾಥ್ ಗೌಡ ಅವರ ವಿಚಾರಣೆ ನಡೆಸುತ್ತಿದ್ದಾರೆ.

2014 ರ ಜೂನ್ ನಲ್ಲಿ ನಲ್ಲಿ ನಡೆದ ಡಿಸಿಸಿ ಬ್ಯಾಂಕ್ ಹಗರಣ ಭಾರಿ ಸುದ್ದಿಯಾಗಿತ್ತು. ನಕಲಿ ಚಿನ್ನ ಅಡವಿಟ್ಟು 62 ಕೋಟಿ ಸಾಲ ನೀಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದ ದಾಳಿ ಇದಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read