ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ.20 ಕ್ಕೆ ಕೋರ್ಟ್ ವಿಚಾರಣೆ ಮುಂದೂಡಿಕೆ ಮಾಡಿ ಆದೇಶ ಹೊರಡಿಸಿದೆ.
ಬೆಂಗಳೂರಿನ 57 ನೇ ಸಿಸಿಹೆಚ್ ಕೋರ್ಟ್ ನಲ್ಲಿ ಇಂದು ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ನಡೆದಿದ್ದು, ಪವಿತ್ರಾ ಗೌಡ ಸೇರಿ ಎಲ್ಲಾ ಆರೋಪಿಗಳು ಹಾಜರಾಗಿದ್ದರು. ಆದರೆ ನಟ ದರ್ಶನ್ ಮಾತ್ರ ಹಾಜರಾಗಿರಲಿಲ್ಲ.
ಬೆನ್ನುನೋವಿನ ಕಾರಣ ಹೇಳಿ ವಿಚಾರಣೆಯಿಂದ ವಿನಾಯಿತಿ ಕೋರಿ ಕೋರ್ಟ್ ಗೆ ನಟ ದರ್ಶನ್ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಇಂತಹ ನೆಪವೊಡ್ಡಿ ಯಾವುದೇ ಕಾರಣಕ್ಕೂ ವಿಚಾರಣೆಗೆ ಗೈರಾಗಬಾರದು ಎಂದು ನಟ ದರ್ಶನ್ ಪರ ವಕೀಲರಿಗೆ ಕೋರ್ಟ್ ಎಚ್ಚರಿಕೆ ನೀಡಿದೆ.
ಪವಿತ್ರಾ ಗೌಡ ಜೊತೆ ನಂದೀಶ್ ಸೇರಿದಂತೆ ಹಲವು ಆರೋಪಿಗಳು ಹಾಜರಾಗಿದ್ದರು. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 17 ಮಂದಿ ಆರೋಪಿಗಳನ್ನು ಬಂಧಿಸಲಾಗಿತ್ತು. ನಂತರ ಕೋರ್ಟ್ ಎಲ್ಲಾ 17 ಮಂದಿ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.