SHOCKING : ಬಿಹಾರದಲ್ಲಿ ಘೋರ ದುರಂತ : ಸಿಡಿಲು ಬಡಿದು 82 ಮಂದಿ ಸಾವು.!

ಪಾಟ್ನಾ : ಬಿಹಾರದಲ್ಲಿ ಸಿಡಿಲು, ಆಲಿಕಲ್ಲು ಮಳೆಯಿಂದಾಗಿ 82 ಮಂದಿ ಸಾವನ್ನಪ್ಪಿದ್ದಾರೆ.ಹೌದು, ಬಿಹಾರದ ವಿವಿಧೆಡೆ ಗುಡುಗು ಸಿಡಿಲಿನ ಆರ್ಭಟಕ್ಕೆ ನಿನ್ನೆ ಒಂದೇ ದಿನ 61 ಮಂದಿ ಮೃತಪಟ್ಟಿದ್ದು, 82 ಮಂದಿ ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಕ್ಕೆ ಮುಖ್ಯಮಂತ್ರಿ ನಿತೀಶ್ ಕುಮಾರ್ ತಲಾ 4 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಏಪ್ರಿಲ್ 10ರಂದು ಗುರುವಾರ ಬಿಹಾರದ ಹಲವಾರು ಜಿಲ್ಲೆಗಳಲ್ಲಿ ಸಿಡಿಲು ಮತ್ತು ಆಲಿಕಲ್ಲು ಮಳೆಗೆ ಹಲವರು ಸಾವನ್ನಪ್ಪಿದ್ದಾರೆ. ನಾಲ್ಕು ಜಿಲ್ಲೆಗಳಲ್ಲಿ ಸಿಡಿಲು ಬಡಿದು ದುರಂತ ಸಂಭವಿಸಿದೆ. ಹೆಚ್ಚಿನ ಸಾವುಗಳು ನಳಂದದಲ್ಲಿ ವರದಿಯಾಗಿವೆ, ನಳಂದದಲ್ಲಿ 18 ಕ್ಕೂ ಹೆಚ್ಚು ಸಾವುಗಳು ಸಂಭವಿಸಿದ್ದರೆ, ಸಿವಾನ್ನಲ್ಲಿ ಇಬ್ಬರು ಮತ್ತು ಕತಿಹಾರ್, ದರ್ಭಂಗಾ, ಬೇಗುಸರಾಯ್, ಭಾಗಲ್ಪುರ್ ಮತ್ತು ಜೆಹಾನಾಬಾದ್ನಲ್ಲಿ ಹಲವರು ಸಾವನ್ನಪ್ಪಿದ್ದಾರೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸಿಡಿಲು ಮತ್ತು ಆಲಿಕಲ್ಲು ಮಳೆಯಿಂದ ಉಂಟಾದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. ಮತ್ತು ಮೃತರ ಹತ್ತಿರದ ಸಂಬಂಧಿಕರಿಗೆ ತಲಾ 4 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read