ಬೆಂಗಳೂರು ಪೊಲೀಸರ ಭರ್ಜರಿ ಬೇಟೆ: ಐಪಿಎಲ್ ಟಿಕೆಟ್ ಕಾಳಸಂತೆ ದಂಧೆ ಬಯಲಿಗೆ, 8 ಮಂದಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆಯುತ್ತಿದ್ದ ಕಾಳಸಂತೆ ಟಿಕೆಟ್ ದಂಧೆಯನ್ನು ಬೆಂಗಳೂರು ಪೊಲೀಸರ ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಬಯಲು ಮಾಡಿದೆ.

ಐಪಿಎಲ್ ಟಿಕೆಟ್‌ಗಳ ಅಕ್ರಮ ಮಾರಾಟದಲ್ಲಿ ಭಾಗಿಯಾಗಿದ್ದ ಎಂಟು ಜನರನ್ನು ಬಂಧಿಸಿದೆ. ಬಂಧಿತರಲ್ಲಿ ಕ್ರೀಡಾಂಗಣದ ಕೆಲಸಗಾರರು ಮತ್ತು ಕ್ಯಾಂಟೀನ್ ಸಿಬ್ಬಂದಿ ಸೇರಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಟಿಕೆಟ್ ಕಾಳಸಂತೆಕೋರರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಬೆಂಗಳೂರು ಪೊಲೀಸ್ ಆಯುಕ್ತರು ಆದೇಶಿಸಿದ್ದಾರೆ.

ಇದರ ಹಿಂದೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆಎಸ್‌ಸಿಎ) ಪ್ರಭಾವಿ ಸದಸ್ಯರ ಪಾತ್ರದ ಬಗ್ಗೆ ತನಿಖೆ ನಡೆಸಲಾಗಿದೆ. ಸಾಮಾನ್ಯ ಅಭಿಮಾನಿಗಳು ಒಂದೇ ಒಂದು ಟಿಕೆಟ್ ಪಡೆಯಲು ಹೆಣಗಾಡುತ್ತಿದ್ದರೆ ಆರೋಪಿಗಳ ಬಳಿ ಹೆಚ್ಚಿನ ಪ್ರಮಾಣದಲ್ಲಿ ಟಿಕೆಟ್‌ ಗಳು ಮತ್ತು ವಿಶೇಷ ಪಾಸ್‌ ಗಳು ಸಹ ಕಂಡು ಬಂದಿವೆ. 1,200 ರೂ., 5,000 ರೂ. ಮತ್ತು 13,000 ರೂ. ವಿವಿಧ ಮೌಲ್ಯದ 18 ಟಿಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳನ್ನು 7,000 ರೂ.ನಿಂದ 32,000 ರೂ.ವರೆಗಿನ ಹೆಚ್ಚಿನ ದರದಲ್ಲಿ ಮರುಮಾರಾಟ ಮಾಡಲಾಗುತ್ತಿತ್ತು ಎಂದು ಆರೋಪಿಸಲಾಗಿದೆ.

ಗುರುವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವಿನ ಐಪಿಎಲ್ ಪಂದ್ಯದ ಸಂದರ್ಭದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ಪಂದ್ಯಾವಳಿಗೆ ಮುಂಚಿತವಾಗಿ ಕಪ್ಪು ಮಾರುಕಟ್ಟೆಯನ್ನು ಹತ್ತಿಕ್ಕಲು ಆದೇಶಿಸಿದ್ದ ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ ಅವರ ನಿರ್ದೇಶನದ ಮೇರೆಗೆ ಕ್ರೀಡಾಂಗಣ ಮತ್ತು ಸುತ್ತಮುತ್ತ ಸಿಸಿಬಿ ತಂಡಗಳನ್ನು ನಿಯೋಜಿಸಲಾಗಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read