ನವದೆಹಲಿ: ಅಫ್ಘಾನಿಸ್ತಾನ-ತಜಕಿಸ್ತಾನ್ ಗಡಿ ಪ್ರದೇಶದಲ್ಲಿ ಶನಿವಾರ ಮಧ್ಯಾಹ್ನ 5.8 ತೀವ್ರತೆಯ ಭೂಕಂಪ ಸಂಭವಿಸಿದ್ದು, ಕಾಶ್ಮೀರ ಮತ್ತು ದೆಹಲಿ-ಎನ್ಸಿಆರ್ ಸೇರಿದಂತೆ ಉತ್ತರ ಭಾರತದ ಕೆಲವು ಭಾಗಗಳಲ್ಲಿ ನಡುಕ ಉಂಟಾಗಿದೆ.
ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ಪ್ರಕಾರ, ಮಧ್ಯಾಹ್ನ 12:17 ಕ್ಕೆ ಮೇಲ್ಮೈಯಿಂದ 86 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ತಾನ-ತಜಿಕಿಸ್ತಾನ್ ಗಡಿ ಪ್ರದೇಶದಲ್ಲಿದೆ, ಇದು ಟೆಕ್ಟೋನಿಕ್ ಚಲನೆಯಿಂದಾಗಿ ಭೂಕಂಪನ ಚಟುವಟಿಕೆಗೆ ಗುರಿಯಾಗುವ ಪ್ರದೇಶವಾಗಿದೆ.
ಕಾಶ್ಮೀರ ಕಣಿವೆ ಮತ್ತು ದೆಹಲಿ-ಎನ್ಸಿಆರ್ನಲ್ಲಿ ಲಘು ಮತ್ತು ಮಧ್ಯಮ ಭೂಕಂಪನದ ಅನುಭವವಾಗಿದ್ದು, ನಿವಾಸಿಗಳಲ್ಲಿ ಆತಂಕಕ್ಕೆ ಕಾರಣವಾಗಿದೆ. ಕಾಶ್ಮೀರದಿಂದ ಬಂದ ವೀಡಿಯೊದಲ್ಲಿ ನೆಲ ಕಂಪಿಸಲು ಪ್ರಾರಂಭಿಸಿದ ಕೆಲವೇ ಕ್ಷಣಗಳಲ್ಲಿ ಜನರು ಕಟ್ಟಡದಿಂದ ಹೊರಗೆ ಧಾವಿಸುತ್ತಿರುವುದನ್ನು ತೋರಿಸಿದೆ. ಗಡಿಯ ಎರಡೂ ಕಡೆಯಿಂದ ಯಾವುದೇ ಸಾವುನೋವುಗಳು ಅಥವಾ ದೊಡ್ಡ ಹಾನಿಯ ಬಗ್ಗೆ ತಕ್ಷಣದ ವರದಿಗಳಿಲ್ಲ.
TAGGED:ಭೂಕಂಪ