ಬೆಂಗಳೂರು: ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಐಜಿಪಿ ಓಂ ಪ್ರಕಾಶ್ ಅವರ ಅಂತಿಮ ದರ್ಶನಕ್ಕೆ ಸಿದ್ಧತೆ ಮಾಡಲಾಗುತ್ತಿದೆ. ಈಗಾಗಲೇ ಸೆಂಟ್ ಜಾನ್ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆದಿದ್ದು, ಮರಣೋತ್ತರ ಪರೀಕ್ಷೆ ಮುಗಿದ ಬಳಿಕ ಮೃತದೇಹವನ್ನು ಹೆಚ್.ಎಸ್.ಆರ್.ಲೇಔಟ್ ಗೆ ತರಲಾಗುತ್ತಿದೆ.
ಹೆಚ್.ಎಸ್.ಆರ್.ಲೇಔಟ್ ನ ಟೆನ್ನಿಸ್ ಕೋರ್ಟ್ ನಲ್ಲಿ ಪಾರ್ಥಿವಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಎಂಸಿಹೆಚ್ ಎಸ್ ಕ್ಲಬ್ ನಲ್ಲಿಯೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.
ಬಳಿಕ ಮಾಧ್ಯಾಹ್ನ 3 ಗಂಟೆಗೆ ವಿಲ್ಸನ್ ಗಾರ್ಡನ್ ನಲ್ಲಿ ಎಲೆಕ್ಟ್ರಿಕ್ ಕ್ರಿಮಿಟೋರಿಯಂ ನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು ತಿಳಿದುಬಂದಿದೆ.
ಕೌಟುಂಬಿಕ ಕಲಹಕ್ಕೆ ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಅವರನ್ನು ಪತ್ನಿ ಪಲ್ಲವಿಯೇ ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಹತ್ಯೆ ಬಳಿಕ ಸ್ವತಃ ಪೊಲೀಸರಿಗೆ ಕರೆ ಮಾಡಿ ಪತ್ನಿ ಮಾಹಿತಿ ನೀಡಿದ್ದರು. ಆರೋಪಿಗಳಾದ ಪತ್ನಿ ಪಲ್ಲವಿ ಹಾಗೂ ಪುತ್ರಿ ಕೃತಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.