ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಯ ನಂತರ ಸೌದಿ ಅರೇಬಿಯಾ ಭೇಟಿಯನ್ನು ಮೊಟಕುಗೊಳಿಸಿದ ಪ್ರಧಾನಿ ಮೋದಿ ಭಾರತಕ್ಕೆ ಹಿಂದಿರುಗಿದ್ದಾರೆ
ಇಬ್ಬರು ಕನ್ನಡಿಗರಾದ ಶಿವಮೊಗ್ಗದ ಮಂಜುನಾಥ್, ಬೆಂಗಳೂರಿನ ಭರತ್ ಭೂಷಣ್ ಸೇರಿದಂತೆ 30 ಜೀವಗಳನ್ನು ಬಲಿ ಪಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ರಾತ್ರಿ ಭಾರತಕ್ಕೆ ತೆರಳಲು ತಮ್ಮ ಎರಡು ದಿನಗಳ ಸೌದಿ ಪ್ರವಾಸವನ್ನು ಮೊಟಕುಗೊಳಿಸಿದ್ದಾರೆ. ಪ್ರಧಾನಿ ಮೋದಿ ಮೂಲತಃ ಬುಧವಾರ ರಾತ್ರಿ ನವದೆಹಲಿಗೆ ಮರಳಬೇಕಿತ್ತು. ಬುಧವಾರ ನಡೆಯಲಿರುವ ಭದ್ರತೆ ಕುರಿತ ಸಂಪುಟ ಸಮಿತಿ(ಸಿಸಿಎಸ್) ಸಭೆಯಲ್ಲಿ ಪ್ರಧಾನಿ ಭಾಗವಹಿಸುವ ನಿರೀಕ್ಷೆಯಿದೆ.
ಪ್ರಧಾನಿ ಮೋದಿ ಅವರು ಸೌದಿ ಅರೇಬಿಯಾಕ್ಕೆ ತಮ್ಮ ರಾಜ್ಯ ಭೇಟಿಯನ್ನು ಮುಗಿಸಿ ಭಾರತಕ್ಕೆ ತೆರಳಲು ಯೋಜಿಸಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ದಾಳಿಯಲ್ಲಿ 30 ಜನರು ಸಾವನ್ನಪ್ಪಿದ್ದಾರೆ, ಮೃತರಲ್ಲಿ ಹೆಚ್ಚಾಗಿ ಇತರ ರಾಜ್ಯಗಳಿಂದ ಪ್ರವಾಸಕ್ಕೆ ಬಂದವರಾಗಿದ್ದಾರೆ. 2019 ರಲ್ಲಿ ಪುಲ್ವಾಮಾ ದಾಳಿಯ ನಂತರ ಕಣಿವೆಯಲ್ಲಿ ನಡೆದ ಅತ್ಯಂತ ಭೀಕರ ದಾಳಿ ಇದಾಗಿದೆ.
PM Narendra Modi concludes his State Visit to Saudi Arabia and has emplaned for India.
— ANI (@ANI) April 22, 2025
(Source – Randhir Jaiswal/X) pic.twitter.com/JVBBTNUoDC