ಜಮ್ಮು-ಕಾಶ್ಮೀರದಲ್ಲಿ ರಕ್ತ ಪಿಪಾಸುಗಳ ಆಪರೇಷನ್ ಕಾರ್ಯಾಚರಣೆ ಆರಂಭವಾಗಿದ್ದು, 250 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಹೌದು, ಉಗ್ರರ ದಾಳಿಯಲ್ಲಿ ಭಾಗಿಯಾಗಿರುವ ಆರೋಪದಡಿ ಎನ್ ಐ ಎ ಅಧಿಕಾರಿಗಳು 250 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ಶಂಕಿತರ ಫೋಟೋಗಳನ್ನು ಭದ್ರತಾ ಸಂಸ್ಥೆಗಳು ಏಪ್ರಿಲ್ 23 ರ ಬುಧವಾರ ಬಿಡುಗಡೆ ಮಾಡಿವೆ,’ಮಿನಿ ಸ್ವಿಟ್ಜರ್ಲೆಂಡ್’ ಎಂದೂ ಕರೆಯಲ್ಪಡುವ ಪಹಲ್ಗಾಮ್ ಬಳಿಯ ಜನಪ್ರಿಯ ಪ್ರವಾಸಿ ತಾಣವಾದ ಸುಂದರವಾದ ಬೈಸರನ್ ಹುಲ್ಲುಗಾವಲಿನಲ್ಲಿ ಈ ದಾಳಿ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸೌದಿ ಅರೇಬಿಯಾ ಭೇಟಿಯನ್ನು ಮೊಟಕುಗೊಳಿಸಿ ದೆಹಲಿಗೆ ಮರಳಿದರೆ, ಗೃಹ ಸಚಿವ ಅಮಿತ್ ಶಾ ಮಂಗಳವಾರ ಕಾಶ್ಮೀರಕ್ಕೆ ಧಾವಿಸಿದರು.