ಬೆಂಗಳೂರು : ಮಗು ಇದೆ ಅಂದ್ರೂ ಶೂಟ್ ಮಾಡಿದ್ರು , ಕೈ ಮುಗಿದು ಕೇಳಿದರೂ ಬಿಡಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಎದುರು ಭರತ್ ಭೂಷಣ್ ಪತ್ನಿ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.
ಇಂದು ಬೆಳಗ್ಗೆ ಭರತ್ ಭೂಷಣ್ ಪಾರ್ಥಿವ ಶರೀರ ಇಂಡಿಗೋ ವಿಮಾನದಲ್ಲಿ ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ಗೆ ಆಗಮಿಸಿತು. ಮನೆಗೆ ಬಂದ ಸುಜಾತಾ ಅವರು ಸಿಎಂ ಸಿದ್ದರಾಮಯ್ಯ ಎದುರು ಉಗ್ರರ ಕರಾಳ ಮುಖವನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತರು.
ಉಗ್ರರು ತನ್ನ ಪತಿಯ ಮೇಲೆ ಗುಂಡಿನ ದಾಳಿ ನಡೆಸಿದ ಬಳಿಕ ನಾನು ತಲೆ ಎತ್ತಲಿಲ್ಲ. ನನ್ನ 3 ವರ್ಷದ ಮಗುವನ್ನು ಉಳಿಸಿಕೊಳ್ಳಬೇಕಾಗಿದ್ದರಿಂದ ನಾನು ಓಡಿದೆ. ಅಲ್ಲಿ ಹೆಣ್ಣದ ರಾಶಿ ಬಿದ್ದಿತ್ತು. ಕೊನೆಗೆ ಕುದುರೆ ಸಹಾಯದಿಂದ ಬಂದು ಸಿಆರ್ ಪಿಎಫ್ ಮೆಸ್ ಗೆ ಬಂದೆ ಎಂದಿದ್ದಾರೆ. ಮೊದಲು ನಾವು ಪಟಾಕಿ ಶಬ್ದವಿರಬಹುದು ಎಂದು ಸುಮ್ಮನಿದ್ದೆವು. ಆದರೆ ಹತ್ತಿರದಲ್ಲೇ ಏನೋ ದಾಳಿ ನಡೆಯುತ್ತಿದೆ ಎಂದು ಗೊತ್ತಾಗಿತ್ತು ಎಂದಿದ್ದಾರೆ.