ಮಂಗಳೂರು : ಮಂಗಳೂರಿನ ಗುಂಪು ಹತ್ಯೆ ಪ್ರಕರಣದಲ್ಲಿ 20 ಮಂದಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವ ಪರಮೇಶ್ವರ್ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ್ದಕ್ಕೆ ಹೊಡೆದಿದ್ದಾರೆ. ಅವನು ಜಿಂದಾಬಾದ್ ಘೋಷಣೆ ಕೂಗಿದ್ದಾನೋ, ಗೊತ್ತಿಲ್ಲ. ಈ ಬಗ್ಗೆ ಕೇಸ್ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಪ್ರಕರಣದಲ್ಲಿ 20 ಮಂದಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ಮಂಗಳೂರು ಗ್ರಾಮಾಂತರ ಪೊಲೀಸ್ ವ್ಯಾಪ್ತಿಯ ಕುಡುಪು ಎಂಬಲ್ಲಿ ಭಾನುವಾರ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ ಆತನ ಸಾವಿಗೆ ಕಾರಣವಾದ ಆರೋಪದ ಮೇಲೆ ಮಂಗಳೂರು ಪೊಲೀಸರು ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ ಅಡಿಯಲ್ಲಿ 20 ಜನರನ್ನು ಬಂಧಿಸಿದ್ದಾರೆ .ಬಲಿಪಶುವನ್ನು 35 ರಿಂದ 40 ವರ್ಷ ವಯಸ್ಸಿನವನೆಂದು ಪ್ರಾಥಮಿಕವಾಗಿ ಗುರುತಿಸಲಾಗಿದ್ದು, ಕೇರಳದ ವಯನಾಡ್ ಜಿಲ್ಲೆಯ ಸುಲ್ತಾನ್ ಬತ್ತೇರಿ ತಾಲ್ಲೂಕಿನ ಪುಲ್ಪಲ್ಲಿ ಗ್ರಾಮದ ನಿವಾಸಿ ಅಶ್ರಫ್ ಎಂದು ಗುರುತಿಸಲಾಗಿದೆ. ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಕ್ಕೆ ಆತನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.