ನಕ್ಸಲ್ ನಿಗ್ರಹ ಪಡೆ ಮಾದರಿಯಲ್ಲಿ ಕರಾವಳಿಯಲ್ಲಿ ‘ಕೋಮು ಹಿಂಸೆ ನಿಗ್ರಹ ಕಾರ್ಯಪಡೆ’ ರಚನೆ ಮಾಡುವುದಾಗಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೋಮು ಹಿಂಸಾಚಾರ ನಿಯಂತ್ರಿಸಲು ನಕ್ಸಲ್ ನಿಗ್ರಹ ಪಡೆ ಮಾದರಿಯಲ್ಲಿ ʼಕೋಮು ಹಿಂಸೆ ನಿಗ್ರಹ ಕಾರ್ಯಪಡೆʼಯನ್ನು ರಚಿಸಲಿದ್ದೇವೆ. ಇದು ಪೊಲೀಸರ ಸಹಯೋಗದಲ್ಲಿ ಕೆಲಸ ಮಾಡಲಿದೆ. ಯಾರು ಕೋಮು ಚಟುವಟಿಕೆಯನ್ನು ನಡೆಸುತ್ತಾರೆ, ಯಾರು ಅದನ್ನು ಬೆಂಬಲಿಸುತ್ತಾರೆ, ಅಂತಹವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವ ಅಧಿಕಾರವನ್ನು ಈ ಕಾರ್ಯಪಡೆಗೆ ಒದಗಿಸುತ್ತೇವೆ ಎಂದು ತಿಳಿಸಿದ್ದಾರೆ.