BIG NEWS: ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಸಂಪೂರ್ಣ ಬೆಂಬಲ ಘೋಷಿಸಿದ ಕತಾರ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕತಾರ್ ಅಮೀರ್ ಶೇಖ್ ತಮೀಮ್ ಬಿನ್ ಹಮದ್ ಅಲ್-ಥಾನಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.

 ಪಹಲ್ಗಾಮ್‌ ನಲ್ಲಿ ನಡೆದ ಗಡಿಯಾಚೆಗಿನ ಭಯೋತ್ಪಾದಕ ದಾಳಿಯಲ್ಲಿ ಪ್ರಾಣ ಕಳೆದುಕೊಂಡವರಿಗೆ ಅಲ್-ಥಾನಿ ಸಂತಾಪ ಸೂಚಿಸಿದ್ದಾರೆ. ಭಯೋತ್ಪಾದನೆಯ ವಿರುದ್ಧದ ಭಾರತದ ಹೋರಾಟದ ಎಲ್ಲಾ ಕ್ರಮಗಳಿಗೆ ಕತಾರ್ ಅಮೀರ್ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಕತಾರ್ ನಿಂದ ಈ ಕರೆ ಬಂದಿದೆ.

ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರ ಪ್ರಕಾರ, 26 ಜೀವಗಳನ್ನು ಬಲಿತೆಗೆದುಕೊಂಡ ಗಡಿಯಾಚೆಗಿನ ಭಯೋತ್ಪಾದಕ ದಾಳಿಯನ್ನು ಅಮೀರ್ ಖಂಡಿಸಿದರು ಮತ್ತು ಭಯೋತ್ಪಾದನೆಯ ವಿರುದ್ಧ ಭಾರತದ ಹೋರಾಟಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು. ಅಪರಾಧಿಗಳನ್ನು ನ್ಯಾಯಕ್ಕೆ ತರುವ ಭಾರತದ ಪ್ರಯತ್ನಗಳನ್ನು ಅವರು ಬೆಂಬಲಿಸಿದರು.

ಭಾರತ-ಕತಾರ್ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸುವ ತಮ್ಮ ಬದ್ಧತೆಯನ್ನು ಇಬ್ಬರೂ ನಾಯಕರು ಪುನರುಚ್ಚರಿಸಿದರು. ಈ ವರ್ಷದ ಆರಂಭದಲ್ಲಿ ಅಮೀರ್ ಅವರ ಭಾರತ ಭೇಟಿಯ ಸಮಯದಲ್ಲಿ ತೆಗೆದುಕೊಂಡ ನಿರ್ಧಾರಗಳನ್ನು ಅನುಷ್ಠಾನಗೊಳಿಸುವುದನ್ನು ಮುಂದುವರಿಸಲು ಒಪ್ಪಿಕೊಂಡರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read