ನವದೆಹಲಿ: ‘ಆಪರೇಷನ್ ಸಿಂದೂರ್’ ಅಡಿಯಲ್ಲಿ ಭಾರತದ ನಿಖರ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚಿದ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ದೇಶದ ಉತ್ತರ ಭಾಗಗಳಲ್ಲಿ ವಿಮಾನ ಪ್ರಯಾಣವು ಬುಧವಾರ ವ್ಯಾಪಕ ಅಡಚಣೆ ಎದುರಿಸಲಿದೆ.
ಶ್ರೀನಗರ ವಿಮಾನ ನಿಲ್ದಾಣವನ್ನು ಇಂದು ಸಂಪೂರ್ಣವಾಗಿ ಸ್ಥಗಿತಗೊಳಿಸುವುದಾಗಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ದೃಢಪಡಿಸಿದೆ. ಪರಿಣಾಮವಾಗಿ, ಈ ಪ್ರದೇಶದಲ್ಲಿ ಯಾವುದೇ ವಾಣಿಜ್ಯ ವಿಮಾನಗಳು ಹಾರಾಟ ನಡೆಸುವುದಿಲ್ಲ ಅಥವಾ ಇಳಿಯುವುದಿಲ್ಲ.
ಏರ್ ಇಂಡಿಯಾ ವಿಮಾನಗಳ ರದ್ದು
ಮೇ 7 ರಂದು ಮಧ್ಯಾಹ್ನ 12 ಗಂಟೆಯವರೆಗೆ ಜಮ್ಮು, ಶ್ರೀನಗರ, ಲೇಹ್, ಜೋಧ್ಪುರ, ಅಮೃತಸರ, ಭುಜ್, ಜಾಮ್ನಗರ, ಚಂಡೀಗಢ ಮತ್ತು ರಾಜ್ಕೋಟ್ಗೆ ತನ್ನ ಎಲ್ಲಾ ವಿಮಾನಗಳನ್ನು ರದ್ದುಗೊಳಿಸಿರುವುದಾಗಿ ಏರ್ ಇಂಡಿಯಾ ತಿಳಿಸಿದೆ.
“ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಜಮ್ಮು, ಶ್ರೀನಗರ, ಲೇಹ್, ಜೋಧ್ಪುರ, ಅಮೃತಸರ, ಭುಜ್, ಜಾಮ್ನಗರ, ಚಂಡೀಗಢ ಮತ್ತು ರಾಜ್ಕೋಟ್ಗೆ ಮತ್ತು ಅಲ್ಲಿಂದ ಹೊರಡುವ ಎಲ್ಲಾ ವಿಮಾನಗಳನ್ನು ಮೇ 7 ರಂದು ಮಧ್ಯಾಹ್ನ 12 ಗಂಟೆಯವರೆಗೆ ರದ್ದುಗೊಳಿಸಿದೆ. ಅಮೃತಸರಕ್ಕೆ ಹೋಗುವ ಎರಡು ಅಂತರರಾಷ್ಟ್ರೀಯ ವಿಮಾನಗಳನ್ನು ದೆಹಲಿಗೆ ತಿರುಗಿಸಲಾಗುತ್ತಿದೆ. ಈ ಅನಿರೀಕ್ಷಿತ ಅಡಚಣೆಯಿಂದಾಗಿ ಉಂಟಾದ ಅನಾನುಕೂಲತೆಗೆ ನಾವು ವಿಷಾದಿಸುತ್ತೇವೆ ಎಂದು ಏರ್ ಇಂಡಿಯಾ ವಿಮಾನಯಾನ ಸಂಸ್ಥೆ X ನಲ್ಲಿ ಬರೆದಿದೆ.
ಇಂಡಿಗೋ ಪ್ರಯಾಣ ಸಲಹೆ
ಏರ್ ಇಂಡಿಯಾ ಜೊತೆಗೆ, ಇಂಡಿಗೋ ಉತ್ತರ ಭಾರತದಾದ್ಯಂತ ಹಲವಾರು ಸ್ಥಳಗಳಲ್ಲಿ ತನ್ನ ವಿಮಾನಗಳನ್ನು ರದ್ದುಗೊಳಿಸಿದೆ. ಈ ಪ್ರದೇಶದಲ್ಲಿ ಬದಲಾಗುತ್ತಿರುವ ವಾಯುಪ್ರದೇಶದ ಪರಿಸ್ಥಿತಿಗಳಿಂದಾಗಿ, ಶ್ರೀನಗರ, ಜಮ್ಮು, ಅಮೃತಸರ, ಲೇಹ್, ಚಂಡೀಗಢ ಮತ್ತು ಧರ್ಮಶಾಲಾಗೆ ಮತ್ತು ಅಲ್ಲಿಂದ ಹೊರಡುವ ನಮ್ಮ ವಿಮಾನಗಳು ಪರಿಣಾಮ ಬೀರುತ್ತವೆ ಎಂದು ಇಂಡಿಗೋ ತಿಳಿಸಿದೆ. ವಿಮಾನ ನಿಲ್ದಾಣವನ್ನು ತಲುಪುವ ಮೊದಲು ಪ್ರಯಾಣಿಕರು ತಮ್ಮ ವಿಮಾನ ಕಾರ್ಯಾಚರಣೆ ಸ್ಥಿತಿಯನ್ನು ಪರಿಶೀಲಿಸುವಂತೆ ಕೋರಲಾಗಿದೆ.
ಸ್ಪೈಸ್ ಜೆಟ್ ಪ್ರಯಾಣ ಸಲಹೆ
ಧರ್ಮಶಾಲಾ, ಲೇಹ್, ಜಮ್ಮು, ಶ್ರೀನಗರ ಮತ್ತು ಅಮೃತಸರ ಸೇರಿದಂತೆ ಹಲವಾರು ಪ್ರಮುಖ ವಿಮಾನ ನಿಲ್ದಾಣಗಳನ್ನು ಮುಂದಿನ ಸೂಚನೆ ಬರುವವರೆಗೂ ಮುಚ್ಚಲಾಗಿದೆ ಎಂದು ಸ್ಪೈಸ್ಜೆಟ್ ಸಹ ಸಲಹೆ ನೀಡಿದೆ. ನಿರ್ಗಮನ, ಆಗಮನ ಮತ್ತು ಮುಂದಿನ ವಿಮಾನಗಳು ವಿಳಂಬ ಅಥವಾ ರದ್ದತಿಯನ್ನು ಎದುರಿಸಬಹುದು ಎಂದು ವಿಮಾನಯಾನ ಸಂಸ್ಥೆ ಎಚ್ಚರಿಸಿದೆ. ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಹೋಗುವ ಮೊದಲು ಮಾಹಿತಿ ಪಡೆಯಬೇಕು ಮತ್ತು ಅವರ ವಿಮಾನಗಳ ಸ್ಥಿತಿಯನ್ನು ಪರಿಶೀಲಿಸಬೇಕು ಎಂದು ತಿಳಿಸಲಾಗಿದೆ.
ಆಪರೇಷನ್ ಸಿಂಧೂರ್
ಬುಧವಾರ ಮುಂಜಾನೆ, ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಭಯೋತ್ಪಾದಕ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ಆಪರೇಷನ್ ಸಿಂಧೂರ್ ಅನ್ನು ನಡೆಸಿದೆ. 9 ಉಗ್ರರ ನೆಲೆ ನಾಶಪಡಿಸಿದೆ.
#TravelUpdate: Due to ongoing situation, airports in parts of northern India, including Dharamshala (DHM), Leh (IXL), Jammu (IXJ), Srinagar (SXR), and Amritsar (ATQ), are closed until further notice. Departures, arrivals, and consequential flights may be impacted. Passengers are…
— SpiceJet (@flyspicejet) May 6, 2025
#6ETravelAdvisory: Due to changing airspace conditions in the region, our flights to and from #Srinagar, #Jammu, #Amritsar, #Leh, #Chandigarh and #Dharamshala are impacted. We request you to check your flight status at https://t.co/CjwsVzFov0 before reaching the airport.
— IndiGo (@IndiGo6E) May 6, 2025
#TravelAdvisory
— Air India (@airindia) May 6, 2025
In view of the prevailing situation, Air India has cancelled all its flights to and from the following stations – Jammu, Srinagar, Leh, Jodhpur, Amritsar, Bhuj, Jamnagar, Chandigarh and Rajkot – till 12 noon on 7 May, pending further updates from authorities.…