ನವದೆಹಲಿ : ‘ಆಪರೇಷನ್ ಸಿಂಧೂರ್’ ಇನ್ನೂ ಮುಗಿದಿಲ್ಲ, ಸೇನೆ ನಡೆಸಿದ ದಾಳಿಯಲ್ಲಿ 100 ಉಗ್ರರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಆಪರೇಷನ್ ಸಿಂಧೂರ್ ಇನ್ನೂ ಮುಂದುವರೆದಿದೆ ಎಂದು ಹೇಳಿದರೆ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಬುಧವಾರ ಪಾಕಿಸ್ತಾನದ ಭಯೋತ್ಪಾದಕ ಶಿಬಿರಗಳ ಮೇಲೆ ನಡೆದ ದಾಳಿಯಲ್ಲಿ 100 ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಸರ್ವಪಕ್ಷ ಸಭೆಯಲ್ಲಿ ಹೇಳಿದರು.
‘ಆಪರೇಷನ್ ಸಿಂಧೂರ್’ ಕುರಿತು ಸರ್ಕಾರ ಗುರುವಾರ ಎಲ್ಲಾ ಪಕ್ಷಗಳಿಗೆ ವಿವರಿಸುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಪಕ್ಷಗಳು ಒಗ್ಗಟ್ಟಾಗಿ ನಿಲ್ಲಬೇಕೆಂದು ಒತ್ತಾಯಿಸಿದರು ಎಂದು ಮೂಲಗಳು ತಿಳಿಸಿವೆ. ಅತ್ಯಂತ ವಿಸ್ತಾರವಾದ ಗಡಿಯಾಚೆಗಿನ ದಾಳಿಗಳಲ್ಲಿ ಒಂದಾದ ಪಾಕಿಸ್ತಾನದೊಳಗಿನ ಭಯೋತ್ಪಾದಕ ಶಿಬಿರಗಳ ಮೇಲೆ ಭಾರತವು ದಾಳಿ ನಡೆಸಿದಾಗ ಸಶಸ್ತ್ರ ಪಡೆಗಳ ಶೌರ್ಯದ ಬಗ್ಗೆ ವಿರೋಧ ಪಕ್ಷಗಳಿಗೆ ತಿಳಿಸಲಾಯಿತು. ಪ್ರತಿಯೊಬ್ಬ ಭಾರತೀಯ ನಾಗರಿಕನೂ ಒಗ್ಗಟ್ಟಿನಿಂದ ನಿಲ್ಲಬೇಕು” ಎಂಬುದು ಸರ್ವಪಕ್ಷ ಸಭೆಯಲ್ಲಿ ಪ್ರಧಾನಮಂತ್ರಿ ಕರೆ ನೀಡಿದರು.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ಸಚಿವ ಎಸ್.ಜೈಶಂಕರ್, ಸಚಿವರಾದ ಜೆ.ಪಿ.ನಡ್ಡಾ ಮತ್ತು ನಿರ್ಮಲಾ ಸೀತಾರಾಮನ್ ಭಾಗವಹಿಸಿದ್ದರು.
#WATCH | Delhi | #OperationSindoor | Union Parliamentary Affairs Minister Kiren Rijiju says, "…Many fake news is being propagated to spread fake news, and hence, I appeal to all in this time not to trust any fake news coming out of the country or from within the country and to… pic.twitter.com/Gv32IbBsqc
— ANI (@ANI) May 8, 2025
The government has stated that over 100 terrorists were killed in #OperationSindoor, and the count is still ongoing. The government also mentioned that Operation Sindoor is still underway, making it difficult to provide an exact number. Additionally, the government said that… pic.twitter.com/q1kme1vT68
— ANI (@ANI) May 8, 2025