ನವದೆಹಲಿ: ಪಾಕಿಸ್ತಾನದ ಉಗ್ರರ ನೆಲೆ ಮೇಲೆ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಮುಂದುವರೆಸಿದೆ. ಇದರ ಬೆನ್ನಲ್ಲೇ ಭಾರತದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.
ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಯುದ್ಧದ ವಾತಾವರಣ ಹಿನ್ನೆಲೆಯಲ್ಲಿ ಭಾರತದಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ. ಹಲವು ವಾಯು ಮಾರ್ಗಗಳಿಗೆ ನಿರ್ಬಂಧ ವಿಧಿಸಲಾಗಿದೆ. ಭಾರತದಲ್ಲಿ 27 ವಿಮಾನ ನಿಲ್ದಾಣಗಳು ಬಂದ್ ಆಗಿವೆ.
ಮೇ 10ರ ಮುಂಜಾನೆ 5:30ರವರೆಗೆ 27 ವಿಮಾನ ನಿಲ್ದಾಣಗಳು ಬಂದ್ ಇರಲಿವೆ ಎಂದು ತಿಳಿದುಬಂದಿದೆ. ಇದೇ ವೇಳೆ ಇಂದು ಒಂದೇ ದಿನ 430 ವಿಮಾನಗಳ ಹಾರಾಟ ಸ್ಥಗಿತಗೊಂಡಿವೆ.