BREAKING: ಮಂಗಳೂರಿಂದ ಲಕ್ಷದ್ವೀಪಕ್ಕೆ ಹೊರಟಿದ್ದ ಹಡಗು ಮುಳುಗಡೆ

ಮಂಗಳೂರು: ಮಂಗಳೂರಿನಿಂದ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಹಡಗು ಮುಳುಗಡೆಯಾಗಿದೆ. ಸರಕು ತುಂಬಿದ್ದ ಮಂಗಳೂರಿನ ಹಡಗು ಮುಳುಗಡೆಯಾಗಿದೆ.

ಎಂ.ಎಸ್.ವಿ. ಸಲಾಮತ್ ಎಂಬ ಹೆಸರಿನ ಹಡಗು 60 ನಾಟಿಕಲ್ ಮೈಲು ದೂರದಲ್ಲಿ ಮುಳುಗಡೆಯಾಗಿದೆ. ಮೇ 12ರಂದು ಮಂಗಳೂರು ಬಂದರಿನಿಂದ ಹೊರಟಿತ್ತು. ತಾಂತ್ರಿಕ ಸಮಸ್ಯೆಯಿಂದಾಗಿ ಹಡಗಿನೊಳಗೆ ನೀರು ನುಗ್ಗಿ ಮುಳುಗಿದೆ.

ಮುಳುಗುತ್ತಿದ್ದ ಹಡಗಿನಿಂದ ಸಣ್ಣ ಬೋಟಿಗೆ ಹಾರಿ ಆರು ಜನ ಸಿಬ್ಬಂದಿ ಪ್ರಾಣ ಉಳಿಸಿಕೊಂಡಿದ್ದಾರೆ. ಡಿಂಗಿ ಬೋಟ್ ಮೂಲಕ ಸಿಬ್ಬಂದಿ ಪ್ರಾಣ ಉಳಿಸಿಕೊಂಡಿದ್ದಾರೆ. ಕರಾವಳಿ ರಕ್ಷಣಾ ಪಡೆಗೆ ಬಂದ ಮಾಹಿತಿಯ ಹಿನ್ನೆಲೆಯಲ್ಲಿ ಸಿಬ್ಬಂದಿಯನ್ನು ರಕ್ಷಣೆ ಮಾಡಲಾಗಿದೆ.

ಇಸ್ಮಾಯಿಲ್ ಶರೀಫ್, ಅಲೆಮನ್ ಅಹಮದ್ ಶಾಕಲ್, ಸುಲೇಮಾನ್, ಅಕ್ಬರ್ ಅಬ್ದುಲ್ ಸುರಾನಿ, ಅಜ್ಮಲ್ ಅವರನ್ನು ಕೋಸ್ಟ್ ಗಾರ್ಡ್ ನ ‘ವಿಕ್ರಂ’ ಶಿಪ್ ನಲ್ಲಿ ರಕ್ಷಣೆ ಮಾಡಲಾಗಿದೆ.

 (ಸಾಂದರ್ಭಿಕ ಚಿತ್ರ)

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read