ಬೆಂಗಳೂರು : ಕರ್ನಾಟಕ ಯುಜಿಸಿಇಟಿ ಫಲಿತಾಂಶ ಪ್ರಕಟಗೊಂಡಿದ್ದು, ಬೆಂಗಳೂರಿನ ವಿದ್ಯಾರ್ಥಿ ರಾಜ್ಯಕ್ಕೆ ಟಾಪರ್ ಆಗಿ ಹೊರ ಹೊಮ್ಮಿದ್ದಾನೆ.
ಸಿಇಟಿ ಎಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರಿನ ಮಾರತಹಳ್ಳಿ ಚೈತ್ಯನ್ಯ ಸಿಬಿಎಸ್ಇ ಶಾಲೆಯ ಭವೇಶ್ ಜಯಂತಿ (98.67%) ಮೊದಲ ರ್ಯಾಂಕ್ ಗಳಿಸಿದ್ದಾರೆ ಮತ್ತು . ಚೈತನ್ಯ ಟೆಕ್ನೋ ಸ್ಕೂಲ್, ಕನಕಪುರ ರಸ್ತೆ ಉತ್ತರಹಳ್ಳಿ ಇದರ ವಿದ್ಯಾರ್ಥಿ ಸಾತ್ವಿಕ್ ಬಿರಾದರ್ (99.33%) ಎರಡನೇ ರ್ಯಾಂಕ್ ಗಳಿಸಿದ್ದಾರೆ . ದಿನೇಶ್ ಗೋಮತಿ ಶಂಕರ್ ಅರುಣಾಚಲಂ 3ನೇ ರ್ಯಾಂಕ್ (99%) ಗಳಿಸಿದ್ದಾರೆ.
ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ನಡೆಸಿದ್ದ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ.
ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಬೆಳಿಗ್ಗೆ 11:30 ಕ್ಕೆ ಕೆಇಎ ಕಚೇರಿಯಲ್ಲಿ ಫಲಿತಾಂಶ ಪ್ರಕಟಿಸಿದ್ದಾರೆ.
ಫಲಿತಾಂಶದ ಲಿಂಕ್ ಗಳು ಮಧ್ಯಾಹ್ನ 2 ಗಂಟೆಯ ನಂತರ ಲೈವ್ ಆಗುತ್ತವೆ.
https://cetonline.Karnataka.gov.in/ugcetrank2025/rank2025/checkresult.aspx & https://karresults.nic.in ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.
ವಿದ್ಯಾರ್ಥಿಗಳು ಅಧಿಕೃತ ಜಾಲತಾಣ cetonline.karnataka.gov.in ಜಾಲತಾಣಕ್ಕೆ ಭೇಟಿ ನೀಡಬೇಕು.
-ಕೆಸಿಇಟಿ ಫಲಿತಾಂಶ 2025 ಎಂಬಲ್ಲಿ ಕ್ಲಿಕ್ ಮಾಡಬೇಕು.
-ನಿಮ್ಮ ನೋಂದಣಿ ಸಂಖ್ಯೆ ಸೇರಿದಂತೆ ಇತರೆ ಮಾಹಿತಿ ನಮೂದಿಸಿ.
-ಈ ಬಳಿಕ ಸಬ್ ಮಿಟ್ ಬಟಲ್ ಕ್ಲಿಕ್ ಮಾಡಿದರೇ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ