ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ನ್ಯಾಯದಾನ ಪದ್ಧತಿಯಲ್ಲಿ ಸುಧಾರಣೆ: ಸಿವಿಲ್ ಕೇಸ್ ಇತ್ಯರ್ಥಕ್ಕೆ ಕಾಲಮಿತಿ ನಿಗದಿ

ಬೆಂಗಳೂರು: ನ್ಯಾಯದಾನ ಪದ್ಧತಿ ಸುಧಾರಣೆ ತರುವ ಉದ್ದೇಶದಿಂದ ದೇಶದಲ್ಲಿಯೇ ಮೊದಲ ಬಾರಿಗೆ ರಾಜ್ಯದಲ್ಲಿ ಸಿವಿಲ್ ಕೇಸ್ ಇತ್ಯರ್ಥಕ್ಕೆ ಕಾಲಮಿತಿ ನಿಗದಿಪಡಿಸಲಾಗಿದೆ. ಬಡ ಕಕ್ಷಿದಾರರಿಗೆ ಶೀಘ್ರ ನ್ಯಾಯ ದೊರಕಿಸಲು ಸಿವಿಲ್ ಪ್ರಕ್ರಿಯ ಸಂಹಿತೆ ಕಾನೂನು ಜಾರಿಗೊಳಿಸಲಾಗುತ್ತಿದೆ

ಸೋಮವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ನಿರ್ದಿಷ್ಟ ಸಮಯ ಪಾಲನೆಯೊಂದಿಗೆ ಸೇವೆಯಲ್ಲಿ ಪ್ರಕರಣಗಳ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗಿದೆ. ಕೇಂದ್ರ ಸರ್ಕಾರ ಜಾರಿಗೊಳಿಸಿದ ಸಿಪಿಸಿ(ಸಿವಿಲ್ ಪ್ರಕ್ರಿಯ ಸಂಹಿತೆ) ರಾಜ್ಯಕ್ಕೆ ಹೊಂದಿಕೆಯಾಗುವಂತೆ ಕೆಲವು ತಿದ್ದುಪಡಿ ಮಾಡಿದ್ದು, ರಾಷ್ಟ್ರಪತಿಗಳ ಅಂಕಿತ ದೊರೆತಿದೆ. ಈ ಐತಿಹಾಸಿಕ ತಿದ್ದುಪಡಿಯನ್ನು ದೇಶದಲ್ಲಿಯೇ ಮೊದಲು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಈ ಮೂಲಕ ಸಿವಿಲ್ ನ್ಯಾಯಾಲಯಗಳಲ್ಲಿ ದಾಖಲಾಗುವ ಪ್ರಕರಣಗಳ ವಿಳಂಬಕ್ಕೆ ಮುಕ್ತಿ ನೀಡುವ ತಿದ್ದುಪಡಿ ಕಾನೂನನ್ನು ಕೂಡಲೇ ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ.

ದಶಕಗಳ ಕಾಲ ಬಾಕಿ ಇರುವ ಪ್ರಕರಣಗಳಿಗೆ ಮುಕ್ತಿ ನೀಡಲು ಯಶಸ್ವಿ ಕ್ರಮ ಕೈಗೊಳ್ಳಲಾಗಿದೆ. ಸಿವಿಲ್ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಬಗೆಹರಿಸಲು ಕಡ್ಡಾಯವಾಗಿ ಪ್ರಯತ್ನಿಸಬೇಕು. ಎರಡು ತಿಂಗಳೊಳಗೆ ರಾಜೀ ಸಂಧಾನದ ಪ್ರಯತ್ನ ತಾರ್ಕಿಕ ಅಂತ್ಯ ಕಾಣಬೇಕು. ಸಾಧ್ಯವಾಗದಿದ್ದಲ್ಲಿ ನ್ಯಾಯಾಲಯ ಪ್ರಕರಣವನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಬೇಕು.

ನ್ಯಾಯಾಲಯಗಳ ವಿಚಾರಣೆಯಲ್ಲಿ ವಿಳಂಬವಾಗದಂತೆ ಇಂತಹ ಕಾನೂನು ಜಾರಿಗೊಳಿಸಲಾಗುತ್ತಿದೆ. ಪ್ರಕರಣ ದಾಖಲಾದ ದಿನಾಂಕದಿಂದ 24 ತಿಂಗಳಲ್ಲಿ ಯಾವುದೇ ಯಾವುದೇ ಸಿವಿಲ್ ಪ್ರಕರಣ ಇತ್ಯರ್ಥವಾಗಿ ತಾರ್ಕಿಕ ಅಂತ್ಯ ಕಾಣಲು ಇದು ಸಹಕಾರಿಯಾಗಲಿದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read