BIG NEWS : ರಾಜ್ಯ ಸರ್ಕಾರದಿಂದ ‘ಬಿ-ಖಾತಾ’ ಆಸ್ತಿದಾರರಿಗೆ ಗುಡ್ ನ್ಯೂಸ್ : ಶೀಘ್ರವೇ ನೋಂದಣಿ ಪ್ರಕ್ರಿಯೆ ಮತ್ತೆ ಆರಂಭ

ಬೆಂಗಳೂರು : ರಾಜ್ಯದ ಬಿ ಖಾತಾ ಆಸ್ತಿದಾರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಶೀಘ್ರವೇ ಸರ್ಕಾರದಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಬಿ ಖಾತಾ ಆಸ್ತಿ ನೋಂದಣಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದರಿಂದ ಜನರು ಪರದಾಡಿದ್ದರು. ಇದೀಗ ಶೀಘ್ರವೇ ಸರ್ಕಾರದಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮಹಾನಗರಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಂದರೆ, ಯಾವುದೇ ಪರವಾನಗಿ, ಭೂಪರಿವರ್ತನೆ ಮಾಡಿಸಿಕೊಳ್ಳದೇ, ನಕ್ಷೆ ಮಂಜೂರಾತಿ ಮಾಡಿಕೊಳ್ಳದೇ ಕಂದಾಯ ನಿವೇಶನಗಳಲ್ಲಿ ಕಟ್ಟಡಗಳನ್ನು ಕಟ್ಟಿಕೊಂಡಿದ್ದರೆ ಅಂತಹವರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಿ-ಖಾತಾ ನೀಡಿ ಸಕ್ರಮಗೊಳಿಸುವ ಮಹತ್ವದ ನಿರ್ಧಾರ ಕೈಗೊಂಡಿತ್ತು .

ಈ ದಾಖಲೆಗಳು ಕಡ್ಡಾಯ

ಎ-ಖಾತೆ ಪಡೆಯಲು ಆಸ್ತಿಗೆ ಸಂಬಂಧಿಸಿದ ಸ್ವತ್ತಿನ ಮಾಲೀಕತ್ವ ಸಾಬೀತು ಮಾಡಿಸುವ ಮೊಂದಾಯಿತ ಮಾರಾಟ ಪತ್ರಗಳು/ದಾನ ಪತ್ರ/ವಿಭಾಗ ಪತ್ರಗಳು ಅಥವಾ ಸರ್ಕಾರದ ನಿಗಮ ಮಂಡಳಿಗಳಿಂದ ನೀಡಲಾದ ಹಕ್ಕುಪತ್ರಗಳು/ ಮಂಜೂರಾತಿ ಪತ್ರಗಳು, ಕಂದಾಯ ಇಲಾಖೆಯಿಂದ 94 ಸಿ.ಸಿ. ಅಡಿ ನೀಡಲಾದ ಹಕ್ಕುಪತ್ರ. ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾದ ದೃಢೀಕೃತ ಪ್ರತಿ ಮತ್ತು ನಿವೇಶನ ಬಿಡುಗಡೆ ಪತ್ರ. ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ. ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ. ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ. ಮಾಲೀಕರ ಗುರುತಿನ ದಾಖಲೆ ಪ್ರತಿ ಮತ್ತು ಕಟ್ಟಡವಿದ್ದಲ್ಲಿ ವಿದ್ಯುಚ್ಛಕ್ತಿ ಬಿಲ್ ಪ್ರತಿಗಳನ್ನು ಸಲ್ಲಿಸುವುದು.

ಬಿ-ಖಾತೆ ಪಡೆಯಲು ಆಸ್ತಿಗೆ ಸಂಬಂಧಿಸಿದಂತೆ ಸ್ವತ್ತಿನ ಮಾಲೀಕತ್ವ ಸಾಬೀತು ಪಡಿಸುವ ದಿ: 10/09/2024ರ ಪೂರ್ವದಲ್ಲಿ ನೊಂದಾಯಿತ ಮಾರಾಟ ಪತ್ರಗಳು/ ದಾನ ಪತ್ರ/ವಿಭಾಗ ಪತ್ರಗಳು/ಹಕ್ಕು ಖುಲಾಸೆ ಪತ್ರಗಳು. ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ. ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ. ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ. ಮಾಲೀಕರ ಗುರುತಿನ ದಾಖಲೆ ಪ್ರತಿಗಳನ್ನು ಸಲ್ಲಿಸುವುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read