SHOCKING : ಕೆಲಸ ಸಿಗದಿದ್ದಕ್ಕೆ ಮನನೊಂದು ಬೆಂಗಳೂರಲ್ಲಿ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ.!

ಬೆಂಗಳೂರು : ಕೆಲಸ ಸಿಗದಿದ್ದಕ್ಕೆ ಮನನೊಂದು ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿಯಲ್ಲಿ ನಡೆದಿದೆ.

ಮೃತನನ್ನು ಬಿಹಾರ ಮೂಲದ ರಾಹುಲ್ ಕುಮಾರ್ ಯಾದವ್ (22) ಎಂದು ಗುರುತಿಸಲಾಗಿದೆ. ಈತ ಬೆಂಗಳೂರಿನಲ್ಲಿ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದನು. ಕೆಲಸ ಸಿಗದೇ ನೊಂದು ಊರಿಗೆ ಬರಲು ನಿರ್ಧರಿಸಿದ್ದನು.

ಪೋಷಕರು ಊರಿಗೆ ಬರಲು ನಿರಾಕರಿಸಿದ ಹಿನ್ನೆಲೆ ಮನನೊಂದ ಯುವಕ ಬಾಡಿಗೆ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read