BREAKING : ಬೆಂಗಳೂರಿಗೆ ಆಗಮಿಸಿದ ‘ವಿರಾಟ್ ಕೊಹ್ಲಿ’ಗೆ  ಕನ್ನಡದ ಬಾವುಟ ನೀಡಿ ಸ್ವಾಗತ ಕೋರಿದ DCM ಡಿ.ಕೆ.ಶಿವಕುಮಾರ್.!

ಬೆಂಗಳೂರು : ಆರ್ ಸಿ ಬಿ ಭರ್ಜರಿ ಗೆಲುವಿನ ಬೆನ್ನಲ್ಲೇ ಬೆಂಗಳೂರಿಗೆ ಆಗಮಿಸಿದ ವಿರಾಟ್ ಕೊಹ್ಲಿ ಮತ್ತು ತಂಡಕ್ಕೆ ಕನ್ನಡ ಹಾಗೂ ಆರ್ ಸಿಬಿ ಬಾವುಟ ನೀಡಿ ಡಿಸಿಎಂ ಡಿ.ಕೆ.ಶಿವಕುಮಾರ್ ಸ್ವಾಗತ ಕೋರಿದ್ದಾರೆ.

18 ವರ್ಷಗಳ ಕನಸನ್ನು 18ನೇ ಐಪಿಎಲ್ ಆವೃತ್ತಿಯಲ್ಲಿ ನನಸು ಮಾಡಿ, ನಮ್ಮ ಹುಡುಗ್ರು ತವರಿನ ಅಂಗಳಕ್ಕೆ ವಾಪಸ್ಸಾಗಿದ್ದಾರೆ.

ಈ ಶುಭ ಸಂದರ್ಭದಲ್ಲಿ, ಇತಿಹಾಸ ಸೃಷ್ಟಿಸಿದ ಆರ್ಸಿಬಿ ತಂಡಕ್ಕೆ ಕರ್ನಾಟಕದ ಮಣ್ಣಿನಿಂದ ಪ್ರೀತಿಯ, ಭವ್ಯ ಸ್ವಾಗತ! ಎಂದು ಟ್ವೀಟ್ ಮಾಡಿದ್ದಾರೆ.

ಐಪಿಎಲ್ ಟ್ರೋಫಿ ಹಿಡಿದು ಆರ್ ಸಿಬಿ (RCB) ಆಟಗಾರರು ಬೆಂಗಳೂರಿಗೆ ಆಗಮಿಸಿದ್ದು, ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಹೌದು. 18 ವರ್ಷದ ಬಳಿಕ ಐಪಿಎಲ್ ಟ್ರೋಫಿ ಗೆದ್ದಿರುವ ರಾಯಲ್ ಚಾಲೇಂಜರ್ಸ್ ಬೆಂಗಳೂರು ತಂಡದ ಆಟಗಾರರು ಮೊದಲ ಟ್ರೋಫಿ ಕೈಯಲ್ಲಿ ಹಿಡಿದು ಬೆಂಗಳೂರಿಗೆ ಆಗಮಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read