GOOD NEWS : ‘ಇಂದಿರಾ ಕ್ಯಾಂಟೀನ್’ ನಲ್ಲಿ ಮೊಟ್ಟೆ ಪೂರೈಕೆಗೆ ರಾಜ್ಯ ಸರ್ಕಾರ ಚಿಂತನೆ : ಸಚಿವ ರಹೀಂ ಖಾನ್

ಬೆಂಗಳೂರು : ಇಂದಿರಾ ಕ್ಯಾಂಟೀನ್ ನಲ್ಲಿ ಮೊಟ್ಟೆ ಪೂರೈಕೆಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇಂದಿರಾ ಕ್ಯಾಂಟೀನ್ಗಳಲ್ಲಿ ಪೋಷಕಾಂಶ ಯುಕ್ತ ಮಾಂಸಾಹಾರ, ಮೊಟ್ಟೆ ನೀಡಬೇಕೆಂಬ ಬೇಡಿಕೆ ಇದ್ದು, ಈ ಹಿನ್ನೆಲೆಯಲ್ಲಿ ಮೊಟ್ಟೆ ನೀಡುವ ಪ್ರಸ್ತಾವ ಸರ್ಕಾರದ ಮುಂದಿದೆ ಎಂದು ಪೌರಾಡಳಿತ ಮತ್ತು ವಕ್ಸ್ ಸಚಿವ ರಹೀಂ ಖಾನ್ ತಿಳಿಸಿದರು.

ಜೊತೆ ಮಾಂಸಹಾರ, ಮೊಟ್ಟೆಯನ್ನು ನೀಡುವಂತೆ ಸಾರ್ವಜನಿಕರಿಂದ ಬೇಡಿಕೆ ಬಂದಿದೆ, ಮೊಟ್ಟೆ ನೀಡುವ ಪ್ರಸ್ತಾಪವನ್ನು ಸರ್ಕಾರ ಪರಿಶೀಲಿಸುತ್ತಿದೆ ಎಂದರು. ಲಕ್ಷಾಂತರ ಬಡ ಜನರಿಗೆ ಹೆಚ್ಚು ಪೋಷಕಾಂಶಯುಕ್ತ ಆಹಾರವನ್ನು ಕಡಿಮೆ ಬೆಲೆಯಲ್ಲಿ ಪಡೆಯಲು ಅವಕಾಶವೂ ಸಿಕ್ಕಂತಾಗುತ್ತದೆ ಎಂದು ಹೇಳಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ 2 ವರ್ಷದಲ್ಲಿ ಮತ್ತೆ 186 ಹೊಸ ಇಂದಿರಾ ಕ್ಯಾಂಟೀನ್ ಗಳಿಗೆ ಅನುಮೋದನೆ ನೀಡಲಾಗಿದೆ. ನೂರಕ್ಕೂ ಹೆಚ್ಚು ಕ್ಯಾಂಟೀನ್ ಕಾರ್ಯಾರಂಭಮಾಡಿವೆ ಎಂದು ತಿಳಿಸಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read