BREAKING: ರಾಜಕೀಯವಾಗಿ ಸೇಫ್ ಆಗಲು ಪ್ರಾಥಮಿಕ ವಿಚಾರಣೆ ನಡೆಸದೇ ಪೊಲೀಸ್ ಅಧಿಕಾರಿಗಳ ತಲೆದಂಡ ಖಂಡನೀಯ: ಜ್ಯೋತಿಪ್ರಕಾಶ್ ಮಿರ್ಜಿ

ಬೆಂಗಳೂರು: ಇದು ಬೇಜವಾಬ್ದಾರಿ ಸರ್ಕಾರ ನಾಚಿಕೆಗೇಡಿನ ಸರ್ಕಾರವಾಗಿದೆ ಎಂದು ನಿವೃತ್ತ ಐಪಿಎಸ್ ಅಧಿಕಾರಿ ಜ್ಯೋತಿ ಪ್ರಕಾಶ್ ಮಿರ್ಜಿ ಹೇಳಿದ್ದಾರೆ.

ಕಾಲ್ತುಳಿತ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳ ತಲೆತಂಡ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪೊಲೀಸರ ಜೊತೆ ಸಹಕರಿಸಿ ಸರ್ಕಾರ ಕೆಲಸ ಮಾಡಬೇಕು. ಇದರಲ್ಲಿ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಡಿಜಿ ಐಜಿಪಿ ಅವರ ಪಾತ್ರ ಏನು ಇಲ್ಲವೇ ಎಂದು ಪ್ರಶ್ನಿಸಿದ್ದಾರೆ.

 ಒತ್ತಡ ಇದೆ ಎಂದು ಕಾರ್ಯಕ್ರಮ ಮಾಡುತ್ತಾರೆ. ಒತ್ತಡ ಇದೆ ಎಂದು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದ್ರಾ ಎಂದು ಪ್ರಶ್ನಿಸಿದ್ದಾರೆ.

ಡಿಸಿಎಂ ಡಿ.ಕೆ. ಶಿವಕುಮಾರ್ ಜೋರಾಗಿ ಓಡಾಡಿ ದಬ್ಬಾಳಿಕೆ ಮಾಡಿದ್ದಾರೆ. ಯಾವುದೇ ಪೂರ್ವ ತಯಾರಿ ಮಾಡಿಲ್ಲ. ಬಲವಂತದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ರಾಜಕೀಯವಾಗಿ ಸೇಫ್ ಆಗಲು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಮೈಲೇಜ್ ಪಡೆಯಲು ಕಾರ್ಯಕ್ರಮ ಕೈಗೊಂಡಿದ್ದಾರೆ. ಪ್ರಾಥಮಿಕ ವಿಚಾರಣೆ ನಡೆಸದೇ ಕ್ರಮ ಜರುಗಿಸಿರುವುದು ಖಂಡನೀಯ ಎಂದು ನಿವೃತ್ತ ಐಪಿಎಸ್ ಅಧಿಕಾರಿ ಜ್ಯೋತಿಪ್ರಕಾಶ್ ಮಿರ್ಜಿ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read