ಬೆಂಗಳೂರು : ಬೆಂಗಳೂರಿನಲ್ಲಿ ಭೀಕರ ಕಾಲ್ತುಳಿತ ದುರಂತ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಕಾಲ್ತುಳಿತ ದುರಂತ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಿ ಡಿಜಿ & ಐಜಿಪಿ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಿಂದ KSCA ಪದಾಧಿಕಾರಿಗಳು ಹೈಕೋರ್ಟ್ ಮೊರೆಹೋಗಿದ್ದು, ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಕೆ ಎಸ್ ಸಿಎ ಆಡಳಿತ ಮಂಡಳಿ ಅಧ್ಯಕ್ಷ ರಘುರಾಮ್ ಭಟ್ , ಕಾರ್ಯದರ್ಶಿ ಎಂ ಶಂಕರ್., ಖಜಾಂಚಿ ಇಎಸ್ ಜೈರಾಮ್ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಎಫ್ ಐ ರದ್ದು ಕೋರಿ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಬೆಂಗಳೂರು: ಕಾಲ್ತುಳಿತ ದುರಂತದಲ್ಲಿ ಆರ್ ಸಿಬಿಯ 11 ಅಭಿಮಾನಿಗಳು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಕೆ ಎಸ್ ಸಿಎ ಕಾರ್ಯದರ್ಶಿ, ಖಜಾಂಚಿ, ಇವೆಂಟ್ ಮ್ಯಾನೇಜ್ಮೆಂಟ್ ಮುಖ್ಯಸ್ಥರ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.