BREAKING: ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಜಾಮೀನು ರದ್ದು: ಸುಪ್ರೀಂಕೋರ್ಟ್ ಆದೇಶ

ಬೆಂಗಳೂರು: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿ ವಿನಯ್ ಕುಲಕರ್ಣಿ ಜಾಮೀನು ರದ್ದುಪಡಿಸಲಾಗಿದೆ.

ಸುಪ್ರೀಂಕೋರ್ಟ್ ಶಾಸಕ ವಿನಯ್ ಕುಲಕರ್ಣಿ ಅವರ ಜಾಮೀನು ರದ್ದು ಮಾಡಿದೆ. ಸಾಕ್ಷಿಗಳಿಗೆ ಒಂದು ಲಕ್ಷ ರೂಪಾಯಿ ಹಣದ ಆಮಿಷವೊಡ್ಡಿರುವುದರಿಂದ ಜಾಮೀನು ರದ್ದು ಕೋರಿ ಸಿಬಿಐ ಮನವಿ ಮಾಡಿತ್ತು.

ಜಾಮೀನು ರದ್ದುಪಡಿಸಿದ ಸುಪ್ರೀಂಕೋರ್ಟ್ ಒಂದು ವಾರದಲ್ಲಿ ಕೋರ್ಟ್ ಮುಂದೆ ಶರಣಾಗಲು ವಿನಯ್ ಕುಲಕರ್ಣಿಗೆ ಆದೇಶ ನೀಡಿದೆ. ಜಾಮೀನು ರದ್ದುಪಡಿಸಿದ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಜೈಲು ಸೇರಲಿದ್ದಾರೆ. ಶರಣಾದ ತಕ್ಷಣವೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಅವರನ್ನು ಜೈಲಿಗೆ ಕಳುಹಿಸಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read