BREAKING : ‘ಸೆಮಿನಾರ್’ ತಪ್ಪಿಸಲು ಕಣಚೂರು ಮೆಡಿಕಲ್ ಕಾಲೇಜಿಗೆ ಬಾಂಬ್ ಬೆದರಿಕೆ ಕರೆ ಮಾಡಿದ್ದ ವಿದ್ಯಾರ್ಥಿನಿ ಅರೆಸ್ಟ್.!

ಉಳ್ಳಾಲ ( ದಕ್ಷಿಣ ಕನ್ನಡ) : ತಾಲೂಕಿನ ವೈದ್ಯಕೀಯ ಕಾಲೇಜು/ಆಸ್ಪತ್ರೆಗೆ ಬಾಂಬ್ ಬೆದರಿಕೆ ಕರೆ ಮಾಡಿದ್ದ ವಿದ್ಯಾರ್ಥಿನಿಯನ್ನು ಪೊಲೀಸರು ಬಂಧಿಸಿದ್ದಾರೆ.

ಅದೇ ಕಾಲೇಜಿನ ವಿದ್ಯಾರ್ಥಿನಿ ಹುಸಿ ಕರೆ ಮಾಡಿದ್ದಳು. ಸೆಮಿನಾರ್ ತಪ್ಪಿಸಲು ಫೋನ್ ಕರೆ ಮಾಡಿದ್ದಳು. ಸದ್ಯ ವಿದ್ಯಾರ್ಥಿನಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಬಂಧಿತರನ್ನು ಡಾ. ಚಲಸಾನಿ ಮೋನಿಕಾ ಚೌಧರಿ ಎಂದು ಗುರುತಿಸಲಾಗಿದೆ. ಸೆಮಿನಾರ್ ತಪ್ಪಿಸಲು ಈಕೆ ಹುಸಿ ಬಾಂಬ್ ಕರೆ ಮಾಡಿದ್ದಳು ಎನ್ನಲಾಗಿದೆ.

ತಾಲೂಕಿನ ನಾಟೆಕಲ್ ನಲ್ಲಿರುವ ಕಣಚೂರು ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜಿನಲ್ಲಿ ಬಾಂಬ್ ಇಡಲಾಗಿದೆ ಎಂಬ ಫೋನ್ ಕರೆ ಬಂದಿತ್ತು. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಆಸ್ಪತ್ರೆಯನ್ನು ಪರಿಶೀಲಿಸಿತ್ತು, ನಂತರ ಹುಸಿ ಕರೆ ಎಂದು ಗೊತ್ತಾಗಿತ್ತು. ಬುಧವಾರ ಬೆಳಗ್ಗೆ 8:15 ರ ವೇಳೆಗೆ ಬಾಂಬ್ ಕರೆ ಬಂದಿತ್ತು. ಈ ಸಂಬಂಧ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ಪತ್ತೆಗೆ ಬಲೆ ಬೀಸಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read