ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಸಂಭವಿಸಿ 11 ಜನರು ಸಾವನ್ನಪ್ಪಿರುವ ಘಟನೆ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ನಾಳೆ ವಿಪಕ್ಷ ಬಿಜೆಪಿ ಪ್ರತಿಭಟನೆ ನಡೆಸಲು ಮುಂದಾಗಿದೆ.
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ ಪ್ರತಿಭಟನೆ ನಡೆಸಲಿದ್ದು, ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕರು, ಸಂಸದರು, ಎಂಎಲ್ ಸಿಗಳು ಪಾಲ್ಗೊಳ್ಳಲಿದ್ದಾರೆ. ನಾಳೆ ಬೆಳಿಗ್ಗೆ 11ಗಂಟೆಗೆ ಪ್ರತಿಭಟನೆ ಪ್ರಾರಂಭವಾಗಲಿದೆ.