ಬೆಂಗಳೂರು: ಮೆಟ್ರೋ ಪಿಲ್ಲರ್ ಗೆ ಬಿಎಂಟಿಸಿ ಬಸ್ ಡಿಕ್ಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಗೊಂಡಿದ್ದ ಓರ್ವ ಪ್ರಯಾಣಿಕ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಬಿಡದಿ ಮೂಲದ ಪ್ರಯಾಣಿಕ ಜಯರಾಮ್(57) ಮೃತಪಟ್ಟವರು ಎಂದು ಹೇಳಲಾಗಿದೆ. ಚಿಕಿತ್ಸೆ ಫಲಿಸದೇ ಖಾಸಗಿ ಆಸ್ಪತ್ರೆಯಲ್ಲಿ ಜಯರಾಮ್ ಸಾವನ್ನಪ್ಪಿದ್ದಾರೆ.
ಜೂನ್ 6ರಂದು ರಾತ್ರಿ 8:30 ಕ್ಕೆ ಬಿಎಂಟಿಸಿ ಬಸ್ ಅಪಘಾತಕ್ಕೀಡಾಗಿದ್ದು, ಅಪಘಾತದಲ್ಲಿ ಚಾಲಕ, ನಿರ್ವಾಹಕ ಸೇರಿ 12 ಜನ ಗಾಯಗೊಂಡಿದ್ದರು. ಪೊಲೀಸರು ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.
ಕೆಂಗೇರಿ ಮೈಲಸಂದ್ರ ಸಮೀಪ ಅಪಘಾತ ನಡೆದಿತ್ತು. ಕೆಆರ್ ಮಾರುಕಟ್ಟೆಯಿಂದ ಬಿಡದಿಗೆ ತೆರಳುತ್ತಿದ್ದ ಬಿಎಂಟಿಸಿ ಬಸ್ ನ ಸ್ಟೇರಿಂಗ್ ಸಂಪರ್ಕ ಕಟ್ ಆಗಿ ನಿಯಂತ್ರಣ ಕಳೆದುಕೊಂಡು ಮೆಟ್ರೋಪಿಲ್ಲರ್ ಗೆ ಡಿಕ್ಕಿ ಹೊಡೆದಿತ್ತು. ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.