ರಾಮನಗರ: ಕೊಂಡ ಹಾಯುವಾಗ ಆಯತಪ್ಪಿ ಬಿದ್ದು ಅರ್ಚಕ ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ಹರಿಂಧ್ಯಾಪನಹಳ್ಳಿಯಲ್ಲಿ ನಡೆದಿದೆ.
ಕೊಂಡ ಹಾಯುವಾಗ ಬಿದ್ದು ಅರ್ಚಕ ಕರಿಯಪ್ಪ(50) ಗಂಭೀರವಾಗಿ ಗಾಯಗೊಂಡಿದ್ದಾರೆ. ಗ್ರಾಮದ ಪಟ್ಟಲದಮ್ಮ ದೇವಿಯ ಕೊಂಡೋತ್ಸವದ ವೇಳೆ ಘಟನೆ ನಡೆದಿದೆ. ಗಾಯಗೊಂಡ ಅರ್ಚಕ ಕರಿಯಪ್ಪರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋಡಿಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.