BIG NEWS: ಸರಡಗಿ ಬ್ರಿಡ್ಜ್ ಬಳಿ ದುರಂತ: ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಯುವಕ ಭೀಮಾನದಿ ನೀರು ಪಾಲು

ಕಲಬುರಗಿ: ಭೀಮಾ ನದಿಯಲ್ಲಿ ಈಜಲು ಇಳಿದಿದ್ದ ಯುವಕ ಇದ್ದಕ್ಕಿದ್ದಂತೆ ನಾಪತ್ತೆಯಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಸರಡಗಿ ಬ್ರಿಡ್ಜ್ ಬಳಿ ನಡೆದಿದೆ.

20 ವರ್ಷದ ಮಹದೇವ್ ನೀರುಪಾಲಾಗಿರುವ ಯುವಕ. ಕಲಬುರಗಿಯಿಂದ ಐದು ಜನರ ಸ್ನೇಹಿತರ ಜೊತೆ ಭೀಮಾನದಿಗೆ ಈಜಲು ತೆರಳಿದ್ದ. ಈ ವೇಳೆ ಈಜು ಬಾರದಿದ್ದರೂ ನದಿಗೆ ಇಳಿದಿದ್ದು, ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾನೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ದೌಡಾಯಿಸಿದ್ದು, ಯುವಕನಿಗಾಗಿ ನದಿಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಜೇವರ್ಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read