ತೆಲಂಗಾಣ ಸಚಿವ ಸಂಪುಟ ವಿಸ್ತರಣೆ: ಸಚಿವರಾಗಿ ಮೂವರು ಕಾಂಗ್ರೆಸ್ ಶಾಸಕರ ಪ್ರಮಾಣವಚನ

ಹೈದರಾಬಾದ್: ತೆಲಂಗಾಣದ ಮೂವರು ಕಾಂಗ್ರೆಸ್ ಶಾಸಕರು ಭಾನುವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಜಿ ವಿವೇಕ್ ವೆಂಕಟ ಸ್ವಾಮಿ, ಅಡ್ಲೂರಿ ಲಕ್ಷ್ಮಣ್ ಕುಮಾರ್ ಮತ್ತು ವಕಿಟಿ ಶ್ರೀಹರಿ ಅವರಿಗೆ ತೆಲಂಗಾಣ ರಾಜ್ಯಪಾಲ ಜಿಷ್ಣು ದೇವ್ ವರ್ಮಾ ಅವರು ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.

ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು. ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಮತ್ತು ಇತರ ಕ್ಯಾಬಿನೆಟ್ ಸಚಿವರು ಸಹ ಸಮಾರಂಭದಲ್ಲಿ ಹಾಜರಿದ್ದರು. ಈ ಮೂವರು ಸಚಿವರ ಸೇರ್ಪಡೆಯೊಂದಿಗೆ, ಈಗ ಸಂಪುಟ ವಿಸ್ತರಣೆಯಾಗಿದೆ.

ದೋರ್ನಕಲ್ ಶಾಸಕ ಜೆ ರಾಮಚಂದರ್ ನಾಯಕ್ ಅವರನ್ನು ತೆಲಂಗಾಣ ವಿಧಾನಸಭೆಯ ಉಪಸಭಾಪತಿಯಾಗಿ ನೇಮಿಸಲಾಗಿದೆ. ಹೊಸದಾಗಿ ಸೇರ್ಪಡೆಗೊಂಡ ಸಚಿವರಿಗೆ ಖಾತೆಗಳ ಹಂಚಿಕೆಯನ್ನು ಇನ್ನೂ ಘೋಷಿಸಿಲ್ಲ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read