ಮೈಸೂರು: ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂ ಅನ್ನು ಬೇರೆ ಕಡೆಗೆ ಸ್ಥಳಾಂತರಿಸುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಅಧಿಕಾರಿಗಳ ತಪ್ಪಿನಿಂದ ಕಾಳ್ತುಳಿತ ಸಂಭವಿಸಿ 11 ಜನ ಮೃತಪಟ್ಟಿದ್ದಾರೆ. ಕಾಲ್ತುಳಿತದಿಂದ ವೈಯಕ್ತಿಕವಾಗಿ ನನಗೆ, ಸರ್ಕಾರಕ್ಕೆ ನೋವಾಗಿದೆ. ಬೆಂಗಳೂರು ಪೊಲೀಸ್ ಕಮಿಷನರ್ ಮಾತ್ರವಲ್ಲ, ಐವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಸಿಎಂ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜ್ ಅವರನ್ನು ತೆಗೆದು ಹಾಕಿದ್ದೇವೆ. ನಾವು ತಪ್ಪು ಮಾಡಿದ್ದರೆ ಬ್ಲಾಕ್ ಮಾರ್ಕ್ ಆಗುತ್ತಿತ್ತು. ನಾವು ತಪ್ಪೇ ಮಾಡಿಲ್ಲ, ಬ್ಲಾಕ್ ಮಾರ್ಕ್ ಇಲ್ಲವೇ ಇಲ್ಲ ಎಂದು ಸಿಎಂ ತಿಳಿಸಿದ್ದಾರೆ.
ಕಾಲ್ತುಳಿತ ದುರಂತದ ಬಗ್ಗೆ ಹೈಕಮಾಂಡ್ ಯಾವುದೇ ವರದಿ ಕೇಳಿಲ್ಲ. ವಿಧಾನಸೌಧದ ಮುಂದೆ ಕಾರ್ಯಕ್ರಮ ಮಾಡದಿದ್ದರೆ ಅದಕ್ಕೆ ಬಿಜೆಪಿ ಬೇರೆ ಬಣ್ಣ ಕಟ್ಟುತ್ತಿತ್ತು ಎಂದು ಹೇಳಿದ್ದಾರೆ.