ರಾಯ್ಪುರ: ಛತ್ತೀಸ್ ಗಢದಲ್ಲಿ ನಕ್ಸಲರ ಅಟ್ಟಹಾಸಕ್ಕೆ ಎ ಎಸ್ ಪಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಛತ್ತೀಸ್ ಗಡದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರು ಐಇಡಿ ಸ್ಫೋಟಿಸಿದ್ದು, ಘಟನೆಯಲ್ಲಿ ಎ ಎಸ್ ಪಿ ಆಕಾಶ್ ರಾವ್ ಗಿರಿಪುಂಜೆ ಮೃತಪಟ್ಟಿದ್ದಾರೆ. ಕೊಂಟಾ-ಎರಾಬೋರಾ ರಸ್ತೆಯ ದೋಂದ್ರಾ ಬಳಿ ಈ ಘಟನೆ ನಡೆದಿದೆ.
ಘಟನೆಯಲ್ಲಿ ಡಿಎಸ್ ಪಿ ಹಾಗೂ ಇನ್ಸ್ ಪೆಕ್ಟರ್ ಸೇರಿದಂತೆ ಇಬ್ಬರು ಭದ್ರತಾ ಸಿಬ್ಬಂದಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಆರಂಭದಲ್ಲಿ ಸುಳ್ಳುಸುದ್ದಿಯೊಂದನ್ನ ಹಬ್ಬಿಸಿದ್ದ ನಕ್ಸಲರು ಪೊಲೀಸರು ಸ್ಥಳಕ್ಕಾಗಮಿಸುವಂತೆ ಮಾಡಿದ್ದಾರೆ ಎನ್ನಲಾಗಿದೆ. ಪೊಲೀಸರು ಬರುತ್ತಿದಂತೆ ಐಇಡಿ ಸ್ಫೋಟಿಸಿದ್ದಾರೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.