BREAKING : ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಹೈವೋಲ್ಟೇಜ್ ಸಭೆ : ಕೆಲವು ಸಚಿವರಿಗೆ ಕೊಕ್ , ಹಲವು ಖಾತೆ ಬದಲಾವಣೆ ಸಾಧ್ಯತೆ.!

ನವದೆಹಲಿ : ದೆಹಲಿಯಲ್ಲಿ ಇಂದು ಕಾಂಗ್ರೆಸ್ ಹೈಕಮಾಂಡ್ ಹೈವೋಲ್ಟೇಜ್ ಸಭೆ ನಡೆಸಲಿದ್ದು, ರಾಜ್ಯದ ಕೆಲವು ಸಚಿವರಿಗೆ ಕೊಕ್ ನೀಡುವ ಸಾಧ್ಯತೆಯಿದ್ದು, ಹಲವು ಖಾತೆ ಬದಲಾವಣೆಯಾಗುವ ನಿರೀಕ್ಷೆಯಿದೆ.

ಹೌದು, ಪಕ್ಷ ಸಂಘಟನೆ, ಸಂಪುಟ ಪುನಾರಚನೆ, ಸಿಎಂ ಸಿದ್ದರಾಮಯ್ಯ ಕಚೇರಿಯಲ್ಲಿ ಅಧಿಕಾರಿಗಳ ಬದಲಾವಣೆಯಾಗುವ ಸಾಧ್ಯತೆಯಿದ್ದು, ರಾಹುಲ್ ಗಾಂಧಿ ಜೊತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಚರ್ಚೆ ನಡೆಸಲಿದ್ದಾರೆ. ಬೆಂಗಳೂರು ಕಾಲ್ತುಳಿತ ದುರಂತದ ಬಗ್ಗೆ ಕೂಡ ಹೈಕಮಾಂಡ್ ಗೆ ಸಿಎಂ, ಡಿಸಿಎಂ ವರದಿ ಸಲ್ಲಿಸಲಿದ್ದಾರೆ. ಸಭೆಯಲ್ಲಿ ಕೆ.ಸಿ ವೇಣುಗೋಪಾಲ್, ಮಲ್ಲಿಕಾರ್ಜುನ ಖರ್ಗೆ ಮತ್ತಿತರರಲಿದ್ದಾರೆ.

ವರಿಷ್ಠರ ಬುಲಾವ್ ಬೆನ್ನಲ್ಲೇ ಇಂದು ಬೆಳಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಒಂದೇ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ.

ಬೆಂಗಳೂರು ಕಾಲ್ತುಳಿತ ದುರಂತದಿಂದ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗಿತ್ತು. ಘಟನೆ ನಡೆದ ದಿನ ಪ್ರಾಥಮಿಕ ಮಾಹಿತಿ ಪಡೆದ ವರಿಷ್ಟರು ಇದೀಗ ಸಂಪೂರ್ಣ ವರದಿ ಪಡೆಯಲಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read