BREAKING : ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರು ಮಕ್ಕಳು ಸೇರಿ ನಾಲ್ವರು ದುರ್ಮರಣ

ಬೆಂಗಳೂರು: ಆಂಧ್ರ ಸಾರಿಗೆ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗೊಟ್ಟಿಪುರ ಗೇಟ್ ಬಳಿ ನಡೆದಿದೆ.

ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮುಂಜಾನೆ ಈ ದುರಂತ ಸಂಭವಿಸಿದೆ. ಆಂಧ್ರ ಸಾರಿಗೆ ಬಸ್ ಬೆಂಗಳೂರಿನಿಂದ ತಿರುಪತಿಗೆ ತೆರಳುತ್ತಿತ್ತು. ಈ ವೇಳೆ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ 16 ಪ್ರಯಾಣಿಕರು ಗಾಯಗೊಂಡಿದ್ದಾರೆ. ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಹೊಸಕೋಟೆ ಸಿಲಿಕಾನ್ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read