ಬೆಳಗಾವಿ: ಲಾರಿ, ಪಿಕಪ್ ವಾಹನ, ಇನೋವಾ ಹಾಗೂ ಸ್ಕಾರ್ಪಿಯೋ ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಬಣಜವಾಡ ಬಳಿಯ ವಿಜಯಪುರ-ಸಂಕೇಶ್ವರ ಹೆದ್ದಾರಿಯಲ್ಲಿ ನಡೆದಿದೆ.
ಮಹಾರಾಷ್ಟ್ರ ಮೂಲದ ಮಹೇಶ್ ಸುಭಾಷ್ ಗಾತಾಡೆ (30), ಶಿರೋಳದ ಶಿವಂ ಯುವರಾಜ್ (24 ಹಾಗೂ ಸಾಂಗ್ಲಿ ಮೂಲದ ಮೀರಜ್ ನ ಸಚಿನ್ ಮಾಳಿ ಮೃತ ದುರ್ದೈವಿಗಳು. ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಅಥಣಿ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಥಣಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.