ಡಿಜಿಟಲ್ ಡೆಸ್ಕ್ : ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ.
ಭಾರಿ ಮಳೆ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಚಿಕ್ಕಮಗಳೂರು, ಉಡುಪಿ, ಮಂಗಳೂರು, ಕೊಡಗು ಜಿಲ್ಲೆಗಳಲ್ಲಿ ಸೋಮವಾರ (ಜೂ.16) ರಜೆ ಘೋಷಿಸಲಾಗಿದೆ.
ಚಿಕ್ಕಮಗಳೂರಿನ ಜಿಲ್ಲೆಯಲ್ಲಿ ಅಂಗನವಾಡಿ. ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು. ಕಳಸ, ಮೂಡಿಗೆರೆ. ಶೃಂಗೇರಿ, ಎನ್ ಆರ್ ಪುರ , ಕೊಪ್ಪ ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವುದರಿಂದ ಅಂಗನವಾಡಿಯಿಂದ ಫ್ರೌಡ ಶಾಲೆವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ.ಕೆ ಆದೇಶ ಹೊಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಂಗಳೂರು, ಬಂಟ್ವಾಳ, ಮೂಡಬಿದ್ರೆ, ಮುಲ್ಕಿ ಮತ್ತು ಉಳ್ಳಾಲ ತಾಲೂಕಿನಲ್ಲಿ ಅಂಗನವಾಡಿಯಿಂದ ಪ್ರೌಢಶಾಲೆವರೆಗೆ ರಜೆ ನೀಡಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಕೊಡಗಿನಲ್ಲಿಯೂ ಜಿಲ್ಲೆಯ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ಜಿಲ್ಲಾಧಿಕಾರಿ ವೆಂಕಟರಾಜಾ ರಜೆ ನೀಡಿದ್ದಾರೆ.
ರಾಜ್ಯದ ಹಲವು ಕಡೆ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಸೇತುವೆ, ರಸ್ತೆಗಳು ಜಲಾವೃತವಾಗಿದ್ದರೆ ಇನ್ನು ಕೆಲವೆಡೆ ತಾತ್ಕಾಲಿಕ ರಸ್ತೆಗಳೇ ನೀರಿನಲ್ಲಿ ಕೊಚ್ಚಿ ಹೋಗಿವೆ.ಬೆಳಗಾವಿಯ ಖಾನಾಪುರದಾದ್ಯಂತ ವರುಣಾರ್ಭಟಕ್ಕೆ ಮಲಪ್ರಭಾ ನದಿ ಉಕ್ಕಿ ಹರಿಯ್ತುತ್ತಿದೆ. ಕುಸಮಳಿ ಗ್ರಾಮದ ಬಳಿ ಮಲಪ್ರಭಾ ನದಿದೆ ಅಡ್ಡಲಾಗಿ ನಿರ್ಮಿಸಿದ್ದ ತಾತ್ಕಾಲಿಕ ರಸ್ತೆ ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ.