ಕೊಲ್ಕತ್ತಾ: ಮತ್ತೊಂದು ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ತುರ್ತು ಭೂಸ್ಪರ್ಶ ಮಾಡಿರುವ ಘಟನೆ ನಡೆದಿದೆ.
ಸ್ಯಾನ್ ಫ್ರಾನ್ಸಿಸ್ಕೋದಿಂದ ಮುಂಬೈಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ಪ್ರಯಾಣಿಕರನ್ನು ಕೋಲ್ಕತ್ತಾದಲ್ಲಿ ಇಳಿಸಲಾಗಿದೆ.
ವಿಮಾನದ ಒಂದು ಎಂಜಿನ್ ನಲ್ಲಿ ಸಮಸ್ಯೆ ಉಂಟಾದ ಕಾರಣ ಈ ವಿಮಾನ ಕೋಲ್ಕತ್ತಾದಿಂದ ಮುಂಬೈಗೆ ಹಾರಲು ಸಾಧ್ಯವಾಗಿಲ್ಲ. ಪ್ರಯಾಣಿಕರಿಗೆ ಏರ್ ಇಂಡಿಯಾ ಕೋಲ್ಕತ್ತಾದಿಂದ ಮುಂಬೈಗೆ ಮತ್ತೊಂದು ವಿಮಾನ ವ್ಯವಸ್ಥೆ ಮಾಡಿದೆ. ವಿಮಾನ ಸಿಬ್ಬಂದಿ ಹಾಗೂ ಪ್ರಯಾಣಿಕರ ಸುರಕ್ಷತೆಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವಿಮಾನದ ಕ್ಯಾಪ್ಟನ್ ಪ್ರಯಾಣಿಕರಿಗೆ ತಿಳಿಸಿದ್ದಾರೆ.