ಬೆಂಗಳೂರು : ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾ ನಿರತ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಆರ್ ಸಿಬಿ ವಿಜಯೋತ್ಸವದಲ್ಲಿ ನಡೆದ ದುರಂತದಲ್ಲಿ 11 ಮಂದಿ ಮೃತಪಟ್ಟಿದ್ದರು. ಘಟನೆ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರೀಡಂಪಾರ್ಕ್ ನಲ್ಲೇ ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಉಪ್ಪಾರಪೇಟೆ ಠಾಣೆ ಪೊಲೀಸರು ವಾಹನದಲ್ಲಿ ಕರೆದೊಯ್ದಿದ್ದಾರೆ.
ಕಾಲ್ತುಳಿತದ ಹೊಣೆ ಹೊತ್ತು ಸಿದ್ದರಾಮಯ್ಯ,ಡಿ.ಕೆ.ಶಿವಕುಮಾರ್, ಪರಮೇಶ್ವರ್ ಅವರು ರಾಜೀನಾಮೆ ನೀಡುವ ತನಕ ನಮ್ಮ ಹೋರಾಟ ನಿಲ್ಲುವುದಿಲ್ಲ.#chinnaswamystadium #Stampede pic.twitter.com/yMMIxNNk6y
— BJP Karnataka (@BJP4Karnataka) June 17, 2025
ವಿಧಾನಸೌಧ ಮುಂಭಾಗ RCB ಕಾರ್ಯಕ್ರಮ ಆಯೋಜಿಸಿದ್ದು ಕಾಂಗ್ರೆಸ್ ಸರ್ಕಾರ.
— BJP Karnataka (@BJP4Karnataka) June 17, 2025
ವಿಧಾನಸೌಧದಿಂದ RCB ಅಭಿಮಾನಿಗಳನ್ನು ಸ್ಟೇಡಿಯಂಗೆ ಕಳಿಸಿದ್ದು ಕಾಂಗ್ರೆಸ್ ಸರ್ಕಾರ.
RCB ಅಭಿಮಾನಿಗಳ ದಾರುಣ ಸಾವಿಗೆ ಕಾರಣವಾಗಿದ್ದು ಕಾಂಗ್ರೆಸ್ ಸರ್ಕಾರ.
ಮಿಸ್ಟರ್ @siddaramaiah ಹಾಗೂ @DKShivakumar, @DrParameshwara ಅವರೇ, ನೈತಿಕ ಹೊಣೆ ಹೊತ್ತು ಕೂಡಲೇ… pic.twitter.com/sE67ZlhbvY