BREAKING : ಕುಟುಂಬ ಸಮೇತ ಕೇರಳದ ಪ್ರಸಿದ್ಧ ಕೊಟ್ಟಿಯೂರು ಶಿವನ ದೇವಾಲಯಕ್ಕೆ ನಟ ದರ್ಶನ್ ಭೇಟಿ.!

‘ಕೇರಳ : ಕೇರಳದ ಕೊಟ್ಟಿಯೂರು ಶಿವನ ದೇವಾಲಯಕ್ಕೆ ನಟ ದರ್ಶನ್ ಮತ್ತು ಕುಟುಂಬ ಭೇಟಿ ನೀಡಿದೆ.
ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾದ ಕೊಟ್ಟಿಯೂರು ಶಿವನ ದೇವಾಲಯಕ್ಕೆ ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿ ಸಮೇತ ಭಾಗಿಯಾಗಿ ಪೂಜೆ ಸಲ್ಲಿಸಿದರು. ನಟ ದರ್ಶನ್ ಜೊತೆ ನಟ ಧನ್ವೀರ್ ಕೂಡ ಭಾಗಿಯಾಗಿದ್ದರು.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೂಲಕ ಬಿಡುಗಡೆಯಾದ ನಟ ದರ್ಶನ್ ಸದ್ಯ ಫ್ಯಾಮಿಲಿ ಜೊತೆ ಹೆಚ್ಚು ಸಮಯ ಕಳೆಯುತ್ತಿದ್ದಾರೆ.

ಕೇರಳದಲ್ಲಿರುವ ಕೊಟ್ಟಿಯೂರಿನ ಶಿವ ದೇವಾಲಯ. ಇಲ್ಲಿನ ಅಕ್ಕರೆ ಕೊಟ್ಟಿಯೂರು ಪ್ರಾಚೀನ ಶಿವ ದೇವಾಲಯವು ಹಿಂದೂ ಪುರಾಣಗಳಲ್ಲಿ ವಿಶೇಷ ಸ್ಥಾನವನ್ನು ಹೊಂದಿದೆ ಮತ್ತು ಅದರ ವಿಶಿಷ್ಟ ಧಾರ್ಮಿಕ ಆಚರಣೆಗಳು ಮತ್ತು ಹಬ್ಬಗಳಿಗೆ ಹೆಸರುವಾಸಿಯಾಗಿದೆ.ವರ್ಷಗಳಲ್ಲಿ 30 ದಿನ ಮಾತ್ರ ತೆರೆಯುವ ಈ ದೇವಸ್ಥಾನ ಬಹಳ ಪ್ರಸಿದ್ದಿ ಪಡೆದಿದೆ.

ಕೊಟ್ಟಿಯೂರು ದೇವಸ್ಥಾನದಲ್ಲಿ 28 ದಿನಗಳ ಕಾಲ ನಡೆಯುವ ವೈಶಾಖಮೋತ್ಸವವು (Vaishakotsava) ದೇವರಿಗೆ ತುಪ್ಪದಿಂದ ಸ್ನಾನ ಮಾಡುವುದರೊಂದಿಗೆ ಪ್ರಾರಂಭವಾಗುತ್ತದೆ. ಇದನ್ನು ನೆಯ್ಯಟ್ಟಂ ಎಂದು ಕರೆಯಲಾಗುತ್ತದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read