ಮಂಗಳೂರು: ಚರಂಡಿ ಗೋಡೆಗೆ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರಿನ ಜಪ್ಪಿನಮೊಗರು ಬಳಿ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಚರಂಡಿ ಗೋಡೆಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ NSUI ಜಿಲ್ಲಾಧ್ಯಕ್ಷ ಸೇರಿ ಇಬ್ಬರು ಸಾವನ್ನಪ್ಪಿದ್ದಾರೆ.
ಕದ್ರಿ ನಿವಾಸಿ ಓಂಶ್ರೀ ಪೂಜಾರಿ, ಅಮನ್ ರಾವ್ ಮೃತ ದುರ್ದೈವಿಗಳು. ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ., ತಲಪಾಡಿಯಿಂದ ಮಂಗಳೂರುಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.