BIG NEWS: ಬಿಬಿಎಂಪಿ ಕಾರ್ಯಪಾಲಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ

ಬೆಂಗಳೂರು: 10 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಬಿಬಿಎಂಪಿ ಕಾರ್ಯಪಾಲಕ ಇಂಜಿನಿಯರ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.

ಸಿ.ವಿ.ರಾಮನ್ ನಗರ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ವಿ.ಯರಪ್ಪ ರೆಡ್ಡಿ ಲೋಕಾಯುಕ್ತ ಬಲೆಗೆ ಬಿದ್ದವರು. ಗುತ್ತಿಗೆದಾರರ ಕಡತ ಫಾರ್ವವರ್ಡ್ ಗೆ ಲಂಚಕ್ಕೆ ಬೇಡಿಕೆ ಇಟ್ತಿದ್ದರು. 10 ಲಕ್ಷ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಹಣದ ಸಹಿತ ಯರಪ್ಪ ರೆಡ್ಡಿ ಲೋಕಾಯುಕ್ತ ಅಧಿಅಕರಿಗಳಿಗೆ ಸಿಕ್ಕಿಬಿದ್ದಿದ್ದು, ಸದ್ಯ ವಶಕ್ಕೆ ಪಡೆದಿರುವ ಅಧಿಕಾರಿಯನ್ನು ವಿಚಾರಣೆ ನಡೆಸಲಾಗುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read