ಬೆಂಗಳೂರು : ಯುವನಿಧಿ ಯೋಜನೆಯಡಿ 3,000 ನಿರುದ್ಯೋಗ ಭತ್ಯೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರದ ಐದು ಖಾತರಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯು ರಾಜ್ಯದ ನಿರುದ್ಯೋಗಿ ಯುವಕ/ಯುವತಿಯರಿಗೆ ನಿರುದ್ಯೋಗ ಭತ್ಯೆಯನ್ನು ನೀಡಿ ಸಬಲೀಕರಣಗೊಳಿಸಲು ಜಾರಿಗೊಳಿಸಿರುವ ಮಹತ್ತರ ಯೋಜನೆಯಾಗಿರುತ್ತದೆ.
ಪದವೀಧರರಿಗೆ/ಸ್ನಾತಕೊತ್ತರ ಪದವೀಧರರಿಗೆ ಮಾಹೆವಾರು ರೂ.3,000/- ಮತ್ತು ಡಿಪ್ಲೋಮಾ (6 ಬೋರ್ಡ್ಗಳಿಂದ) ತೇರ್ಗಡೆಯಾದವರಿಗೆ ಮಾಹೆವಾರು ರೂ.1,500/- ನಿರುದ್ಯೋಗ ಭತ್ಯೆಯನ್ನು ನೇರ ನಗದು ವರ್ಗಾವಣೆ ಮೂಲಕ ಪಾವತಿಸಲಾಗುತ್ತಿದೆ. ಯುವನಿಧಿ ಯೋಜನೆಯು ಪ್ರಸಕ್ತ ಸಾಲಿಗೂ ಮುಂದುವರೆದ ಯೋಜನೆಯಾಗಿದ್ದು, 2024-25ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡಿ 2025 ರಲ್ಲಿ ಪದವಿ/ಸ್ನಾತಕೋತ್ತರ ಪದವಿ/ಡಿಪ್ಲೋಮಾ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು ಈ ಯೋಜನೆಯಡಿ ನೋಂದಾಯಿಸಿ ಕೊಳ್ಳಬಹುದಾಗಿರುತ್ತದೆ.
ಅರ್ಹತೆ:
- 2024-25ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡಿ 2025ರಲ್ಲಿ ಪದವಿ/ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ಉತ್ತೀರ್ಣರಾದ ಅಭ್ಯರ್ಥಿಗಳು.
- ಫಲಿತಾಂಶ ಪ್ರಕಟವಾದ 180 ದಿನಗಳ ನಂತರವೂ ಸಾರ್ವಜನಿಕ/ಖಾಸಗಿ ಕ್ಷೇತ್ರದಲ್ಲಿ ಉದ್ಯೋಗದಲ್ಲಿರದವರು ಹಾಗೂ ಸ್ವಯಂ-ಉದ್ಯೋಗದಲ್ಲಿ ಇರದವರು.
- ಉನ್ನತ ವ್ಯಾಸಂಗವನ್ನು ಮುಂದುವರಿಸದೇ ಇರುವವರು,
- ಕನಿಷ್ಠ 6 ವರ್ಷ ಕರ್ನಾಟಕದ ರಹವಾಸಿ ಆಗಿರಬೇಕು.
ಯುವನಿಧಿ ಪ್ಲಸ್ – ಕೌಶಲ್ಯ ತರಬೇತಿ ಕಾರ್ಯಕ್ರಮ
ಯುವನಿಧಿ ಫಲಾನುಭವಿಗಳು ಉಚಿತ ಕೌಶಲ್ಯ ತರಬೇತಿಯನ್ನು ಪಡೆಯಲು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವೆಬ್ ಸೈಟ್ https://www.kaushalkar.com/app/registration_verify ಅನ್ನು ಕ್ಲಿಕ್ ಮಾಡಿ ನೋಂದಾಯಿಸಿಕೊಳ್ಳುವುದು.
ಅರ್ಹತೆ: - 2024-25ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡಿ 2025ರಲ್ಲಿ ಪದವಿ/ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ಉತ್ತೀರ್ಣರಾದ ಅಭ್ಯರ್ಥಿಗಳು.
- ಫಲಿತಾಂಶ ಪ್ರಕಟವಾದ 180 ದಿನಗಳ ನಂತರವೂ ಸಾರ್ವಜನಿಕ/ಖಾಸಗಿ ಕ್ಷೇತ್ರದಲ್ಲಿ ಉದ್ಯೋಗದಲ್ಲಿರದವರು ಹಾಗೂ ಸ್ವಯಂ-ಉದ್ಯೋಗದಲ್ಲಿ ಇರದವರು.
- ಉನ್ನತ ವ್ಯಾಸಂಗವನ್ನು ಮುಂದುವರಿಸದೇ ಇರುವವರು,
- ಕನಿಷ್ಠ 6 ವರ್ಷ ಕರ್ನಾಟಕದ ರಹವಾಸಿ ಆಗಿರಬೇಕು.
ಯುವನಿಧಿ ಫಲಾನುಭವಿಗಳು ಉಚಿತ ಕೌಶಲ್ಯ ತರಬೇತಿಯನ್ನು ಪಡೆಯಲು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವೆಬ್ ಸೈಟ್ https://www.kaushalkar.com/app/registration_verify
ಅನ್ನು ಕ್ಲಿಕ್ ಮಾಡಿ ನೋಂದಾಯಿಸಿಕೊಳ್ಳುವುದು.
ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು
ಪ್ರತಿ ತ್ರೈಮಾಸಿಕ 1 ರಿಂದ 25 ರೊಳಗೆ ಸ್ವಯಂ ಘೋಷಣೆ ನೀಡುವುದು ಕಡ್ಡಾಯ.
ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಯ ಉದ್ಯೋಗ ವಿನಿಮಯ ಕಚೇರಿಗೆ ಭೇಟಿ ನೀಡುವುದು ಹಾಗೂ ಸಹಾಯವಾಣಿ ಸಂಖ್ಯೆ 1800 599 7154 ಸಂಪರ್ಕಿಸುವುದು.
You Might Also Like
TAGGED:ಯುವನಿಧಿ