BREAKING: ಬೆಂಗಳೂರಲ್ಲಿ ಕಾರ್ ಗಳನ್ನು ಕದ್ದು ಹಳ್ಳಿಗಳಲ್ಲಿ ಮಾರಾಟ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್

ಬೆಂಗಳೂರು: ಕಾರ್ ಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಗ್ಯಾಂಗ್ ಅನ್ನು ಬೆಂಗಳೂರಿನ ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಉಮೇಶ ತಬರೇಜ್, ಜಬೀರ್ ಖಾನ್ ಬಂಧಿತ ಆರೋಪಿಗಳು. ಬಂಧಿತರಿಂದ 12 ಲಕ್ಷ ರೂಪಾಯಿ ಮೌಲ್ಯದ ಆರು ಓಮ್ನಿ ಕಾರ್ ಗಳನ್ನು ಜಪ್ತಿ ಮಾಡಲಾಗಿದೆ. ಈ ಹಿಂದೆ ಆರೋಪಿಗಳು ಟ್ರ್ಯಾಕ್ಟರ್ ಗಳನ್ನು ಕದ್ದು ಮಾರಾಟ ಮಾಡುತ್ತಿದ್ದರು. 2020ರಲ್ಲಿ ಟ್ರಾಕ್ಟರ್ ಕಳ್ಳತನ ಕೇಸ್ ನಲ್ಲಿ ಬಂಧಿತರಾಗಿದ್ದರು.

ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಟ್ರ್ಯಾಕ್ಟರ್ ಕಳ್ಳತನ ನಡೆದಿತ್ತು. ಟ್ರ್ಯಾಕ್ಟರ್ ಕಳ್ಳತನ ಕೇಸ್ ನಲ್ಲಿ ಜೈಲು ಸೇರಿದ್ದ ಆರೋಪಿಗಳು ಹೊರಗೆ ಬಂದಿದ್ದರು. ನಂತರ ಟ್ರ್ಯಾಕ್ಟರ್ ಗಳನ್ನು ಬಿಟ್ಟು ಓಮ್ನಿ ಕಾರ್ ಗಳನ್ನು ಕದಿಯುತ್ತಿದ್ದರು. ಬೆಂಗಳೂರಿನಲ್ಲಿ ಕಾರ್ ಗಳನ್ನು ಕದ್ದು ಹಳ್ಳಿಗಳಲ್ಲಿ ಮಾರಾಟ ಮಾಡುತ್ತಿದ್ದರು. ಮೇ ತಿಂಗಳಲ್ಲೇ ವಿದ್ಯಾರಣ್ಯಪುರದಲ್ಲಿ ಆರೋಪಿಗಳು ಕಾರ್ ಕದ್ದಿದ್ದರು. ಕಾರ್ ಕಳವು ಮಾಡುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ತನಿಖೆ ಕೈಗೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read