ಬೆಂಗಳೂರು : ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದ್ದು, ಬಿ.ವೈ ವಿಜಯೇಂದ್ರ ಸ್ವಾಗತ ಕೋರಿದ್ದಾರೆ
ಇಂದು ನೆಲಮಂಗಲ ಸಮೀಪ ನಡೆಯುವ ಬಿಜಿಎಸ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಕಟ್ಟಡದ ಉದ್ಘಾಟನೆ ಕಾರ್ಯಕ್ರಮದಲ್ಲಿ ಅಮಿತ್ ಶಾ ಭಾಗಿಯಾಗಲಿದ್ದಾರೆ.
ಪಕ್ಷ ಸಂಘಟನೆ ಹಾಗೂ ಕ್ರಿಯಾಶೀಲತೆಯಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿರುವ ನಮ್ಮ ಹೆಮ್ಮೆಯ ಮಾರ್ಗದರ್ಶಕರು, ಮುಂಚೂಣಿ ನಾಯಕರೂ ಆದ ಗೃಹ ಹಾಗೂ ಸಹಕಾರ ಸಚಿವರಾದ ಶ್ರೀ @AmitShah ಅವರು ಇಂದು ಬೆಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ಅವರನ್ನು ಅತ್ಯಂತ ಅಭಿಮಾನ ಹಾಗೂ ಪ್ರೀತಿಪೂರ್ವಕವಾಗಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ವಿಧಾನಸಭಾ ವಿರೋಧ ಪಕ್ಷ ನಾಯಕರಾದ ಶ್ರೀ @RAshokaBJP
, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಶ್ರೀ @nrkbjpಮಾಜಿ ಸಚಿವರಾದ ಶ್ರೀ @CTRavi_BJP ಶ್ರೀ ಪ್ರಭು ಚೌಹಾಣ್, ಸಂಸದರಾದ ಶ್ರೀ @PCMohanMP, ಶ್ರೀ ಡಾ.ಮಂಜುನಾಥ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ನಂದೀಶ್ ರೆಡ್ಡಿ, ಶಾಸಕರು ಹಾಗೂ ರಾಜ್ಯ ಕಾರ್ಯದರ್ಶಿಗಳಾದ ಶ್ರೀ ಶೈಲೇಂದ್ರ ಬೆಲ್ದಾಳೆ, ಮಾಜಿ ಸಂಸದರಾದ ಶ್ರೀ ಡಾ.ಉಮೇಶ್ ಜಾಧವ್, ಸೇರಿದಂತೆ ಪಕ್ಷದ ಶಾಸಕರು ಹಾಗೂ ಪ್ರಮುಖರು ಉಪಸ್ಥಿತರಿದ್ದರು ಎಂದು ಬಿ.ವೈ ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.
Heartily welcomed Shri Amit Shah Ji, Hon’ble Union Minister of Home Affairs and Minister of Cooperation, upon his arrival in Bengaluru.
— Vijayendra Yediyurappa (@BYVijayendra) June 19, 2025
ಪಕ್ಷ ಸಂಘಟನೆ ಹಾಗೂ ಕ್ರಿಯಾಶೀಲತೆಯಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿರುವ ನಮ್ಮ ಹೆಮ್ಮೆಯ ಮಾರ್ಗದರ್ಶಕರು, ಮುಂಚೂಣಿ ನಾಯಕರೂ ಆದ ಗೃಹ ಹಾಗೂ ಸಹಕಾರ ಸಚಿವರಾದ ಶ್ರೀ… pic.twitter.com/20NLI7KvQQ