BREAKING: ಕಲ್ಯಾಣ ಮಂಟಪದಲ್ಲಿ ಆರತಕ್ಷತೆ ವೇಳೆ ದಾಳಿ ಮಾಡಿ ಬಾಲ್ಯ ವಿವಾಹ ತಡೆದ ಅಧಿಕಾರಿಗಳು

ಬೆಂಗಳೂರು: ಆರತಕ್ಷತೆಯ ವೇಳೆ ದಾಳಿ ನಡೆಸಿ ಅಧಿಕಾರಿಗಳು ಬಾಲ್ಯ ವಿವಾಹವನ್ನು ತಡೆದಿದ್ದಾರೆ. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ದಾಳಿ ನಡೆಸಿ ಆರತಕ್ಷತೆ ತಡೆದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ಚನ್ನಪ್ಪ ಸುಬ್ಬಮ್ಮ ಕಲ್ಯಾಣ ಮಂಟಪದಲ್ಲಿ ಘಟನೆ ನಡೆದಿದೆ.

ಪೋಷಕರು 17 ವರ್ಷದ ಬಾಲಕಿಗೆ ಮದುವೆ ಮಾಡಿಸುತ್ತಿದ್ದರು. ವಿಷಯ ತಿಳಿದ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಕ್ಕಳ ಸಹಾಯವಾಣಿ 1098ಕ್ಕೆ ಬಂದ ದೂರಿನ ಮೇರೆಗೆ ಪೋಲಿಸರೊಂದಿಗೆ ದಾಳಿ ನಡೆಸಿ ಆರತಕ್ಷತೆ ವೇಳೆಯಲ್ಲಿ ಬಾಲ್ಯ ವಿವಾಹಕ್ಕೆ ಬ್ರೇಕ್ ಹಾಕಲಾಗಿದೆ. ಪೋಷಕರು, ವರ ಹಾಗೂ ಕಲ್ಯಾಣ ಮಂಟಪದ ಮಾಲೀಕರ ವಿರುದ್ಧವೂ ಅಧಿಕಾರಿಗಳು ಕ್ರಮಕ್ಕೆ ಮುಂದಾಗಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read