BREAKING: ಜಮೀನಿನಿಂದ ಬರುವಾಗ ಕಾಡಾನೆ ದಾಳಿ: ಸ್ಥಳದಲ್ಲೇ ರೈತ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಬಂಡಿಗುಡ್ಡ ಬಳಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ.

ಕುಮಾರ್(50) ಮೃತಪಟ್ಟವರು. ಜಮೀನಿನಿಂದ ಮನೆಗೆ ತೆರಳುತ್ತಿದ್ದಾಗ ಏಕಾಏಕಿ ಕಾಡಾನೆ ದಾಳಿ ಮಾಡಿದೆ. ಕಾಡಾನೆ ದಾಳಿಯಿಂದ ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚನ್ನಗಿರಿ ವಲಯ ಅರಣ್ಯ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಅರಣ್ಯ ಅಧಿಕಾರಿಗಳಿಗೆ ದೂರು ನೀಡಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ಅರಣ್ಯ ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read