BIG NEWS : ‘ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನ’ಕ್ಕೆ ಮುಹೂರ್ತ ಫಿಕ್ಸ್ : ಆಗಸ್ಟ್ 11 ರಿಂದ ಆರಂಭ.!

ಬೆಂಗಳೂರು : ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಆಗಸ್ಟ್ 11, 2025 ರಿಂದ ಈ ಕಲಾಪ ಆರಂಭವಾಗಲಿದೆ.

ರಾಜ್ಯ ಸರ್ಕಾರವು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದು, ಆಗಸ್ಟ್ 11, 2025 ರಿಂದ ಎರಡು ವಾರಗಳ ಕಾಲ ವಿಧಾನಸಭೆಯ ಕಲಾಪ ನಡೆಯಲಿದೆ. ಈ ಅಧಿವೇಶನದಲ್ಲಿ ರಾಜ್ಯದ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ.

ರಾಜ್ಯದ ಸಮಸ್ಯೆಗಳನ್ನು ಚರ್ಚಿಸಲು ಮತ್ತು ಕಾನೂನು ರಚನೆಗೆ ಈ ಅವಕಾಶವನ್ನು ಸರ್ಕಾರ ಬಳಸಿಕೊಳ್ಳಲಿದೆ. ಈ ವೇಳೆ ವಿರೋಧ ಪಕ್ಷಗಳು ಸರ್ಕಾರದ ವಿರುದ್ಶ ಹಲವು ಅಸ್ತ್ರಗಳನ್ನು ಮುಂದಿಟ್ಟುಕೊಂಡು ಜಟಾಪಟಿ ನಡೆಸುವ ಸಾಧ್ಯತೆಯಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read